ರಾಜ್ಯ

ಮುಳ್ಳಯ್ಯನಗಿರಿ : ಸೆ.1 ರಿಂದ ಆನ್‌ಲೈನ್‌ ಬುಕ್ಕಿಂಗ್‌

ಬೆಂಗಳೂರು : ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿಗೆ ಬರುವ ಪ್ರವಾಸಿಗರು ಸೆ.1 ಆನ್‌ಲೈನ್‌ನಲ್ಲಿ ಮೊದಲೇ ಬುಕ್ಕಿಂಗ್‌ ಮಾಡಿಕೊಂಡು ಬರಬೇಕು ಎಂದು ಜಿಲ್ಲಾಡಳಿತ ಆದೇಶಿಸಿದೆ.

ಗಿರಿಭಾಗದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗುರು ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ, ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಇದರಿಂದ ಪ್ರವಾಸಿ ತಾಣಗಳಲ್ಲಿ ದಟ್ಟಣೆ ಉಂಟಾಗುತ್ತಿದ್ದು, ನಿಯಂತ್ರಿಸಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಜಿಲ್ಲಾಡಳಿತದ ವೆಬ್‌ಸೈಟ್‌ ಲಿಂಕ್‌ ಬಳಸಿ ಶುಲ್ಕ ಬೈಕ್‌ಗಳಿಗೆ 50 ರೂ., ಕಾರುಗಳಿಗೆ 100 ರೂ., ತೂಫಾನ್‌ ವಾಹನ 150 ಮತ್ತು ಟೆಂಪೊ ಟ್ರಾವೆಲರ್‌ 200 ರೂ. ಪಾವತಿಸಿ ದಿನಾಂಕ ಮತ್ತು ಸಮಯವನ್ನು ಮೊದಲೇ ಬುಕ್ಕಿಂಗ್‌ ಮಾಡಿಕೊಳ್ಳಬೇಕು. ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ಗಂಟೆ ತನಕ ಮೊದಲ ಅವಧಿ ಮತ್ತು ಮಧ್ಯಾಹ್ನ 1ರಿಂದ ಸಂಜೆ 6 ಗಂಟೆ ತನಕ ಎರಡನೇ ಅವಧಿ ಎಂದು ಸಮಯ ನಿಗದಿ ಮಾಡಲಾಗಿದೆ. ಒಂದು ಅವಧಿಗೆ 600 ವಾಹನಗಳಿಗೆ ಅವಕಾಶ ಇರಲಿದೆ. ಮೊದಲು ಬುಕ್ಕಿಂಗ್‌ ಮಾಡಿಕೊಂಡವರಿಗೆ ಅವಕಾಶ ದೊರಕಲಿದೆ ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

3 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

3 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

3 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

3 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

6 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

7 hours ago