ರಾಜ್ಯ

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಸರ್ವಜ್ಞ ನಗರದ ಹೆಚ್.ಆರ್.ಬಿ.ಆರ್. ಬಡಾವಣೆಯಲ್ಲಿ ನಿರ್ಮಿಸುತ್ತಿರುವ ಆಸ್ಪತ್ರೆ ಕಾಮಗಾರಿಗಳನ್ನು ಪರಿಶೀಲಿಸಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ನೂರು ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾಮಗಾರಿ ಗುಣಮಟ್ಟದಿಂದ ಕೂಡಿದ್ದು, ತಾಂತ್ರಿಕವಾಗಿ ಜನಸ್ನೇಹಿಯಾಗಿದೆ ಎಂಬುದನ್ನು ಸಚಿವ ಜಾರ್ಜ್ ಅವರು ಆರೋಗ್ಯ ಸಚಿವರ ಗಮನಕ್ಕೆ ತಂದರು. ಅಲ್ಲದೆ, ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣಗಳು ಮತ್ತು ಸಿಬ್ಬಂದಿಯನ್ನು ಆರೋಗ್ಯ ಇಲಾಖೆಯಿಂದ ಒದಗಿಸುವಂತೆ ಕೋರಿದರು.

ಮಾದರಿ ಆಸ್ಪತ್ರೆ ನಿರ್ಮಿಸುತ್ತಿರುವ ಸಚಿವ ಕೆ.ಜೆ.ಜಾರ್ಜ್ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ ಸಚಿವ ದಿನೇಶ್ ಗುಂಡೂರಾವ್, ಹಣಕಾಸು ಇಲಾಖೆ ಮೂಲಕ ಅಂದಾಜು ಪಟ್ಟಿ ಸಲ್ಲಿಸುವಂತೆ ತಿಳಿಸಿದರಲ್ಲದೆ, ನಂತರ ಸಚಿವ ಸಂಪುಟದಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶೇಷ ತುರ್ತು ಚಿಕಿತ್ಸೆ ವಿಭಾಗ, ರ‍್ಯಾಂಪ್ ಸೌಕರ್ಯ ಹಾಗೂ ನೆಲಮಹಡಿಯಲ್ಲಿ ಕಿವಿ, ಮೂಗು, ಗಂಟಲು ಹಾಗೂ ವೈದ್ಯರ ಕೊಠಡಿಗಳು ಇರಲಿದೆ. ತೀವ್ರ ನಿಗಾ ಘಟಕ, ಡಯಾಲಿಸಿಸ್ ವಿಭಾಗ ಕೂಡ ಕ್ಷೇತ್ರದ ಜನತೆಗೆ ದೊರೆಯಲಿದೆ ಎಂದು ಸಚಿವರು ಹೇಳಿದರು.

ಈ ವೇಳೆ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು, ಸಚಿವರ ಬೆಂಬಲಿಗರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

53 mins ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

1 hour ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

2 hours ago

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

3 hours ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

3 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

4 hours ago