ರಾಜ್ಯ

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಸರ್ವಜ್ಞ ನಗರದ ಹೆಚ್.ಆರ್.ಬಿ.ಆರ್. ಬಡಾವಣೆಯಲ್ಲಿ ನಿರ್ಮಿಸುತ್ತಿರುವ ಆಸ್ಪತ್ರೆ ಕಾಮಗಾರಿಗಳನ್ನು ಪರಿಶೀಲಿಸಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ನೂರು ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾಮಗಾರಿ ಗುಣಮಟ್ಟದಿಂದ ಕೂಡಿದ್ದು, ತಾಂತ್ರಿಕವಾಗಿ ಜನಸ್ನೇಹಿಯಾಗಿದೆ ಎಂಬುದನ್ನು ಸಚಿವ ಜಾರ್ಜ್ ಅವರು ಆರೋಗ್ಯ ಸಚಿವರ ಗಮನಕ್ಕೆ ತಂದರು. ಅಲ್ಲದೆ, ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣಗಳು ಮತ್ತು ಸಿಬ್ಬಂದಿಯನ್ನು ಆರೋಗ್ಯ ಇಲಾಖೆಯಿಂದ ಒದಗಿಸುವಂತೆ ಕೋರಿದರು.

ಮಾದರಿ ಆಸ್ಪತ್ರೆ ನಿರ್ಮಿಸುತ್ತಿರುವ ಸಚಿವ ಕೆ.ಜೆ.ಜಾರ್ಜ್ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ ಸಚಿವ ದಿನೇಶ್ ಗುಂಡೂರಾವ್, ಹಣಕಾಸು ಇಲಾಖೆ ಮೂಲಕ ಅಂದಾಜು ಪಟ್ಟಿ ಸಲ್ಲಿಸುವಂತೆ ತಿಳಿಸಿದರಲ್ಲದೆ, ನಂತರ ಸಚಿವ ಸಂಪುಟದಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶೇಷ ತುರ್ತು ಚಿಕಿತ್ಸೆ ವಿಭಾಗ, ರ‍್ಯಾಂಪ್ ಸೌಕರ್ಯ ಹಾಗೂ ನೆಲಮಹಡಿಯಲ್ಲಿ ಕಿವಿ, ಮೂಗು, ಗಂಟಲು ಹಾಗೂ ವೈದ್ಯರ ಕೊಠಡಿಗಳು ಇರಲಿದೆ. ತೀವ್ರ ನಿಗಾ ಘಟಕ, ಡಯಾಲಿಸಿಸ್ ವಿಭಾಗ ಕೂಡ ಕ್ಷೇತ್ರದ ಜನತೆಗೆ ದೊರೆಯಲಿದೆ ಎಂದು ಸಚಿವರು ಹೇಳಿದರು.

ಈ ವೇಳೆ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು, ಸಚಿವರ ಬೆಂಬಲಿಗರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

3 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

3 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

3 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

3 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

3 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

3 hours ago