ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಸರ್ವಜ್ಞ ನಗರದ ಹೆಚ್.ಆರ್.ಬಿ.ಆರ್. ಬಡಾವಣೆಯಲ್ಲಿ ನಿರ್ಮಿಸುತ್ತಿರುವ ಆಸ್ಪತ್ರೆ ಕಾಮಗಾರಿಗಳನ್ನು ಪರಿಶೀಲಿಸಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ನೂರು ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾಮಗಾರಿ ಗುಣಮಟ್ಟದಿಂದ ಕೂಡಿದ್ದು, ತಾಂತ್ರಿಕವಾಗಿ ಜನಸ್ನೇಹಿಯಾಗಿದೆ ಎಂಬುದನ್ನು ಸಚಿವ ಜಾರ್ಜ್ ಅವರು ಆರೋಗ್ಯ ಸಚಿವರ ಗಮನಕ್ಕೆ ತಂದರು. ಅಲ್ಲದೆ, ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣಗಳು ಮತ್ತು ಸಿಬ್ಬಂದಿಯನ್ನು ಆರೋಗ್ಯ ಇಲಾಖೆಯಿಂದ ಒದಗಿಸುವಂತೆ ಕೋರಿದರು.
ಮಾದರಿ ಆಸ್ಪತ್ರೆ ನಿರ್ಮಿಸುತ್ತಿರುವ ಸಚಿವ ಕೆ.ಜೆ.ಜಾರ್ಜ್ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ ಸಚಿವ ದಿನೇಶ್ ಗುಂಡೂರಾವ್, ಹಣಕಾಸು ಇಲಾಖೆ ಮೂಲಕ ಅಂದಾಜು ಪಟ್ಟಿ ಸಲ್ಲಿಸುವಂತೆ ತಿಳಿಸಿದರಲ್ಲದೆ, ನಂತರ ಸಚಿವ ಸಂಪುಟದಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶೇಷ ತುರ್ತು ಚಿಕಿತ್ಸೆ ವಿಭಾಗ, ರ್ಯಾಂಪ್ ಸೌಕರ್ಯ ಹಾಗೂ ನೆಲಮಹಡಿಯಲ್ಲಿ ಕಿವಿ, ಮೂಗು, ಗಂಟಲು ಹಾಗೂ ವೈದ್ಯರ ಕೊಠಡಿಗಳು ಇರಲಿದೆ. ತೀವ್ರ ನಿಗಾ ಘಟಕ, ಡಯಾಲಿಸಿಸ್ ವಿಭಾಗ ಕೂಡ ಕ್ಷೇತ್ರದ ಜನತೆಗೆ ದೊರೆಯಲಿದೆ ಎಂದು ಸಚಿವರು ಹೇಳಿದರು.
ಈ ವೇಳೆ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು, ಸಚಿವರ ಬೆಂಬಲಿಗರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…