ಬೆಂಗಳೂರು: ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿ ಅವರು, ಸ್ಥಳೀಯ ಶಾಸಕರಿಗೆ ತಾಳ್ಮೆ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಜೆ.ಪಿ.ಪಾರ್ಕ್ನಲ್ಲಿ ಆಯೋಜಿಸಿದ್ದ ನಡಿಗೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳೀಯ ಶಾಸಕರಿಗೆ ತಾಳ್ಮೆ ಇರಲಿಲ್ಲ. ಗಲಾಟೆ ಮಾಡಲೆಂದೇ ಅವರು ಇಲ್ಲಿಗೆ ಬಂದಿದ್ದರು. ವೇದಿಕೆಗೆ ಆಹ್ವಾನಿಸಿದರೂ ಅವಮಾನ ಮಾಡಿ ಹೋಗಿದ್ದಾರೆ. ಈ ಸಭೆಗೆ ಅವಮಾನ ಮಾಡಿದ್ದಾರೆ. ಇಂತಹವರನ್ನೆಲ್ಲಾ ಶಾಸಕರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಬೇಸರವಾಗುತ್ತಿದೆ ಎಂದರು.
ಇದನ್ನು ಓದಿ : ಡಿಸಿಎಂ ಡಿಕೆಶಿ ಬೆಂಗಳೂರು ನಡಿಗೆಯಲ್ಲಿ ಹೈಡ್ರಾಮಾ: ಶಾಸಕ ಮುನಿರತ್ನ ಪ್ರತಿಭಟನೆ
ಇನ್ನು ಮುಂದುವರಿದು ಮಾತನಾಡಿದ ಅವರು, ಇಂತಹ ಜನಪ್ರತಿನಿಧಿಗಳು ಬೇಕಾ? ಇದರ ಬಗ್ಗೆ ನೀವೇ ನಿರ್ಧಾರಗಳನ್ನು ಮಾಡಬೇಕು ಎಂದು ಹೇಳಿದರು. ಇನ್ನು ರಸ್ತೆ ಗುಂಡಿ ಬಗ್ಗೆಯಾಗಲಿ, ಕಸದ ಸಮಸ್ಯೆ ಬಗ್ಗೆಯಾಗಲಿ ಫೋಟೋ ತೆಗೆದು ದೂರು ನೀಡುವಂತೆ ಸೂಚಿಸಿದ್ದೇವೆ. ಯಾರಿಗೆ ಎಲ್ಲಾ ರಸ್ತೆ ಗುಂಡಿ ಕಂಡುಬಂದರೂ ಅದರ ಒಂದು ಫೋಟೋ ತೆಗೆದು ಕಳುಹಿಸುವಂತೆ ವ್ಯವಸ್ಥೆ ಮಾಡಿದ್ದೇವೆ. ಈ ವ್ಯವಸ್ಥೆ ಈವರೆಗೂ ಯಾವುದೇ ಸರ್ಕಾರ ಎಲ್ಲಿಯೂ ಮಾಡಿರಲಿಲ್ಲ. ಅದನ್ನು ನಾವು ಜಾರಿಗೆ ತಂದಿದ್ದೇವೆ. ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…