ರಾಜ್ಯ

ಮುನಿರತ್ನ ಗಲಾಟೆ ಮಾಡಲೆಂದೇ ಇಲ್ಲಿಗೆ ಬಂದಿದ್ದರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿ ಅವರು, ಸ್ಥಳೀಯ ಶಾಸಕರಿಗೆ ತಾಳ್ಮೆ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಜೆ.ಪಿ.ಪಾರ್ಕ್‌ನಲ್ಲಿ ಆಯೋಜಿಸಿದ್ದ ನಡಿಗೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ಥಳೀಯ ಶಾಸಕರಿಗೆ ತಾಳ್ಮೆ ಇರಲಿಲ್ಲ. ಗಲಾಟೆ ಮಾಡಲೆಂದೇ ಅವರು ಇಲ್ಲಿಗೆ ಬಂದಿದ್ದರು. ವೇದಿಕೆಗೆ ಆಹ್ವಾನಿಸಿದರೂ ಅವಮಾನ ಮಾಡಿ ಹೋಗಿದ್ದಾರೆ. ಈ ಸಭೆಗೆ ಅವಮಾನ ಮಾಡಿದ್ದಾರೆ. ಇಂತಹವರನ್ನೆಲ್ಲಾ ಶಾಸಕರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಬೇಸರವಾಗುತ್ತಿದೆ ಎಂದರು.

ಇದನ್ನು ಓದಿ :  ಡಿಸಿಎಂ ಡಿಕೆಶಿ ಬೆಂಗಳೂರು ನಡಿಗೆಯಲ್ಲಿ ಹೈಡ್ರಾಮಾ: ಶಾಸಕ ಮುನಿರತ್ನ ಪ್ರತಿಭಟನೆ

ಇನ್ನು ಮುಂದುವರಿದು ಮಾತನಾಡಿದ ಅವರು, ಇಂತಹ ಜನಪ್ರತಿನಿಧಿಗಳು ಬೇಕಾ? ಇದರ ಬಗ್ಗೆ ನೀವೇ ನಿರ್ಧಾರಗಳನ್ನು ಮಾಡಬೇಕು ಎಂದು ಹೇಳಿದರು. ಇನ್ನು ರಸ್ತೆ ಗುಂಡಿ ಬಗ್ಗೆಯಾಗಲಿ, ಕಸದ ಸಮಸ್ಯೆ ಬಗ್ಗೆಯಾಗಲಿ ಫೋಟೋ ತೆಗೆದು ದೂರು ನೀಡುವಂತೆ ಸೂಚಿಸಿದ್ದೇವೆ. ಯಾರಿಗೆ ಎಲ್ಲಾ ರಸ್ತೆ ಗುಂಡಿ ಕಂಡುಬಂದರೂ ಅದರ ಒಂದು ಫೋಟೋ ತೆಗೆದು ಕಳುಹಿಸುವಂತೆ ವ್ಯವಸ್ಥೆ ಮಾಡಿದ್ದೇವೆ. ಈ ವ್ಯವಸ್ಥೆ ಈವರೆಗೂ ಯಾವುದೇ ಸರ್ಕಾರ ಎಲ್ಲಿಯೂ ಮಾಡಿರಲಿಲ್ಲ. ಅದನ್ನು ನಾವು ಜಾರಿಗೆ ತಂದಿದ್ದೇವೆ. ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

2 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

3 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

3 hours ago

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

17 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

17 hours ago