ಬೆಂಗಳೂರು: ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿ ಅವರು, ಸ್ಥಳೀಯ ಶಾಸಕರಿಗೆ ತಾಳ್ಮೆ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಜೆ.ಪಿ.ಪಾರ್ಕ್ನಲ್ಲಿ ಆಯೋಜಿಸಿದ್ದ ನಡಿಗೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳೀಯ ಶಾಸಕರಿಗೆ ತಾಳ್ಮೆ ಇರಲಿಲ್ಲ. ಗಲಾಟೆ ಮಾಡಲೆಂದೇ ಅವರು ಇಲ್ಲಿಗೆ ಬಂದಿದ್ದರು. ವೇದಿಕೆಗೆ ಆಹ್ವಾನಿಸಿದರೂ ಅವಮಾನ ಮಾಡಿ ಹೋಗಿದ್ದಾರೆ. ಈ ಸಭೆಗೆ ಅವಮಾನ ಮಾಡಿದ್ದಾರೆ. ಇಂತಹವರನ್ನೆಲ್ಲಾ ಶಾಸಕರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಬೇಸರವಾಗುತ್ತಿದೆ ಎಂದರು.
ಇದನ್ನು ಓದಿ : ಡಿಸಿಎಂ ಡಿಕೆಶಿ ಬೆಂಗಳೂರು ನಡಿಗೆಯಲ್ಲಿ ಹೈಡ್ರಾಮಾ: ಶಾಸಕ ಮುನಿರತ್ನ ಪ್ರತಿಭಟನೆ
ಇನ್ನು ಮುಂದುವರಿದು ಮಾತನಾಡಿದ ಅವರು, ಇಂತಹ ಜನಪ್ರತಿನಿಧಿಗಳು ಬೇಕಾ? ಇದರ ಬಗ್ಗೆ ನೀವೇ ನಿರ್ಧಾರಗಳನ್ನು ಮಾಡಬೇಕು ಎಂದು ಹೇಳಿದರು. ಇನ್ನು ರಸ್ತೆ ಗುಂಡಿ ಬಗ್ಗೆಯಾಗಲಿ, ಕಸದ ಸಮಸ್ಯೆ ಬಗ್ಗೆಯಾಗಲಿ ಫೋಟೋ ತೆಗೆದು ದೂರು ನೀಡುವಂತೆ ಸೂಚಿಸಿದ್ದೇವೆ. ಯಾರಿಗೆ ಎಲ್ಲಾ ರಸ್ತೆ ಗುಂಡಿ ಕಂಡುಬಂದರೂ ಅದರ ಒಂದು ಫೋಟೋ ತೆಗೆದು ಕಳುಹಿಸುವಂತೆ ವ್ಯವಸ್ಥೆ ಮಾಡಿದ್ದೇವೆ. ಈ ವ್ಯವಸ್ಥೆ ಈವರೆಗೂ ಯಾವುದೇ ಸರ್ಕಾರ ಎಲ್ಲಿಯೂ ಮಾಡಿರಲಿಲ್ಲ. ಅದನ್ನು ನಾವು ಜಾರಿಗೆ ತಂದಿದ್ದೇವೆ. ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…