ರಾಜ್ಯ

ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್‌ ಮಾಡಿ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ; ಸಂತ್ರಸ್ಥೆ ಗಂಭೀರ ಆರೋಪ

ಬೆಂಗಳೂರು: ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಿ ಮಂತ್ರಿಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಅತ್ಯಾಚಾರ ದೂರು ನೀಡಿರುವ ಸಂತ್ರಸ್ಥೆ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್‌.9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸರ್ಕಾರದಿಂದ ಭದ್ರತೆ ಕೊಟ್ಟರೆ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಮತ್ತು ಅವರ ಸಂಬಂಧಿತ ವಿಡಿಯೋಗಳನ್ನು ನೀಡುತ್ತೇನೆ. ಇಲ್ಲವಾದರೆ ನೀಡಲು ಸಾಧ್ಯವಿಲ್ಲ ಏಕೆಂದರೆ ಮುನಿರತ್ನ ಅವರಿಂದ ಜೀವ ಬೆದರಿಕೆ ಆಗುವ ಸಂಭವವಿದೆ ಎಂದಿದ್ದಾರೆ. ಮುನಿರತ್ನ ಅವರ ಹತ್ತಿರ ಯಾವುದೇ ಮಾಧ್ಯಮಗಳ ಬಳಿ ಇಲ್ಲದತಂಹ ಅಡ್ವಾನ್ಸ್ಡ್‌ ಕ್ಯಾಮೆರಾಗಳಿವೆ. ಆ ಕ್ಯಾಮೆರಾಗಳ ಮೂಲಕ ಬೇರೆ ಮಹಿಳೆಯರನ್ನು ಬಳಸಿಕೊಂಡು ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಿರುವುದಲ್ಲದೆ, ಆ ವಿಡಿಯೋಗಳನ್ನು ಪೆನ್‌ಡ್ರೈವ್‌ಗಳಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದಾರೆ. ಆದರೆ, ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಲು ನನ್ನನ್ನು ಬಳಕೆ ಮಾಡಿಲ್ಲ ಎಂಬ ನಿಖರವಾದ ಹೇಳಿಕೆಯನ್ನು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡುವ ಸಂದರ್ಭದಲ್ಲಿ ಯಾವುದೇ ಸಿನಿಮಾ ನಟಿಯರನ್ನು ಬಳಸಿಕೊಂಡಿಲ್ಲ. ಅದರ ಬದಲಾಗಿ ಬೇರೆ ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಅಲ್ಲದೇ ಅನೇಕ ರಾಜಕೀಯ ನಾಯಕರನ್ನು ಹನಿಟ್ರ್ಯಾಪ್‌ ಮಾಡಲು ಸಹ ಬಳಸಿಕೊಂಡಿದ್ದಾರೆ. ಮುನಿರತ್ನ ಅವರು ಬಳಸಿಕೊಂಡಿರುವ ಸಂತ್ರಸ್ಥೆಯರು ಹೆದರಿಕೊಂಡು ಸಮ್ಮನಾಗಿದ್ದಾರೆ ಅಷ್ಟ. ಅದರ ಹೊರತಾಗಿ ಸಂತ್ರಸ್ಥ ಮಹಿಳೆಯರು ಕೂಡ ನನ್ನಂತೆಯೇ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು.

ಆರು ಮಂದಿಗೆ ಏಡ್ಸ್‌ ಸೋಂಕಿತರನ್ನು ಬಳಸಿ ಹನಿಟ್ರ್ಯಾಪ್‌

ಶಾಸಕ ಮುನಿರತ್ನ ಅವರು 6 ಮಂದಿ ಏಡ್ಸ್‌ ಸೋಂಕಿತ ಮಹಿಳೆಯರನ್ನು ಬಳಸಿಕೊಂಡು ಉನ್ನತ ಮಟ್ಟದ ಶಾಸಕರಿಗೆ, ಪೊಲೀಸ್‌ ಅಧಿಕಾರಿಗಳಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಹನಿಟ್ರ್ಯಾಪ್‌ ಮಾಡಿದ್ದಾರೆ. ಅಲ್ಲದೇ ಸುಮಾರು 20 ರಿಂದ 30 ರಾಜಕೀಯ ಮುಖಂಡರನ್ನು ಸಹ ಹನಿಟ್ರ್ಯಾಪ್‌ ಮಾಡಿ ಪೆನ್‌ಡ್ರೈವ್‌ನಲ್ಲಿ ವಿಡಿಯೋ ಸಂಗ್ರಹ ಮಾಡಿದ್ದಾರೆ. ಈ ವಿಡಿಯೋಗಳನ್ನು ಎಸ್‌ಐಟಿ ತಂಡ ನನ್ನನ್ನು ಮಾಹಿತಿ ಕೇಳಿದಾಗ ಅವರಿಗೆ ಮಾಜಿ ಮುಖ್ಯಮಂತ್ರಿಗಳ ವಿಡಿಯೋಗಳನ್ನು ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

11 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

12 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

13 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

13 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

13 hours ago