ರಾಜ್ಯ

ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್‌ ಮಾಡಿ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ; ಸಂತ್ರಸ್ಥೆ ಗಂಭೀರ ಆರೋಪ

ಬೆಂಗಳೂರು: ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಿ ಮಂತ್ರಿಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಅತ್ಯಾಚಾರ ದೂರು ನೀಡಿರುವ ಸಂತ್ರಸ್ಥೆ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್‌.9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸರ್ಕಾರದಿಂದ ಭದ್ರತೆ ಕೊಟ್ಟರೆ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಮತ್ತು ಅವರ ಸಂಬಂಧಿತ ವಿಡಿಯೋಗಳನ್ನು ನೀಡುತ್ತೇನೆ. ಇಲ್ಲವಾದರೆ ನೀಡಲು ಸಾಧ್ಯವಿಲ್ಲ ಏಕೆಂದರೆ ಮುನಿರತ್ನ ಅವರಿಂದ ಜೀವ ಬೆದರಿಕೆ ಆಗುವ ಸಂಭವವಿದೆ ಎಂದಿದ್ದಾರೆ. ಮುನಿರತ್ನ ಅವರ ಹತ್ತಿರ ಯಾವುದೇ ಮಾಧ್ಯಮಗಳ ಬಳಿ ಇಲ್ಲದತಂಹ ಅಡ್ವಾನ್ಸ್ಡ್‌ ಕ್ಯಾಮೆರಾಗಳಿವೆ. ಆ ಕ್ಯಾಮೆರಾಗಳ ಮೂಲಕ ಬೇರೆ ಮಹಿಳೆಯರನ್ನು ಬಳಸಿಕೊಂಡು ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಿರುವುದಲ್ಲದೆ, ಆ ವಿಡಿಯೋಗಳನ್ನು ಪೆನ್‌ಡ್ರೈವ್‌ಗಳಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದಾರೆ. ಆದರೆ, ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಲು ನನ್ನನ್ನು ಬಳಕೆ ಮಾಡಿಲ್ಲ ಎಂಬ ನಿಖರವಾದ ಹೇಳಿಕೆಯನ್ನು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡುವ ಸಂದರ್ಭದಲ್ಲಿ ಯಾವುದೇ ಸಿನಿಮಾ ನಟಿಯರನ್ನು ಬಳಸಿಕೊಂಡಿಲ್ಲ. ಅದರ ಬದಲಾಗಿ ಬೇರೆ ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಅಲ್ಲದೇ ಅನೇಕ ರಾಜಕೀಯ ನಾಯಕರನ್ನು ಹನಿಟ್ರ್ಯಾಪ್‌ ಮಾಡಲು ಸಹ ಬಳಸಿಕೊಂಡಿದ್ದಾರೆ. ಮುನಿರತ್ನ ಅವರು ಬಳಸಿಕೊಂಡಿರುವ ಸಂತ್ರಸ್ಥೆಯರು ಹೆದರಿಕೊಂಡು ಸಮ್ಮನಾಗಿದ್ದಾರೆ ಅಷ್ಟ. ಅದರ ಹೊರತಾಗಿ ಸಂತ್ರಸ್ಥ ಮಹಿಳೆಯರು ಕೂಡ ನನ್ನಂತೆಯೇ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು.

ಆರು ಮಂದಿಗೆ ಏಡ್ಸ್‌ ಸೋಂಕಿತರನ್ನು ಬಳಸಿ ಹನಿಟ್ರ್ಯಾಪ್‌

ಶಾಸಕ ಮುನಿರತ್ನ ಅವರು 6 ಮಂದಿ ಏಡ್ಸ್‌ ಸೋಂಕಿತ ಮಹಿಳೆಯರನ್ನು ಬಳಸಿಕೊಂಡು ಉನ್ನತ ಮಟ್ಟದ ಶಾಸಕರಿಗೆ, ಪೊಲೀಸ್‌ ಅಧಿಕಾರಿಗಳಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಹನಿಟ್ರ್ಯಾಪ್‌ ಮಾಡಿದ್ದಾರೆ. ಅಲ್ಲದೇ ಸುಮಾರು 20 ರಿಂದ 30 ರಾಜಕೀಯ ಮುಖಂಡರನ್ನು ಸಹ ಹನಿಟ್ರ್ಯಾಪ್‌ ಮಾಡಿ ಪೆನ್‌ಡ್ರೈವ್‌ನಲ್ಲಿ ವಿಡಿಯೋ ಸಂಗ್ರಹ ಮಾಡಿದ್ದಾರೆ. ಈ ವಿಡಿಯೋಗಳನ್ನು ಎಸ್‌ಐಟಿ ತಂಡ ನನ್ನನ್ನು ಮಾಹಿತಿ ಕೇಳಿದಾಗ ಅವರಿಗೆ ಮಾಜಿ ಮುಖ್ಯಮಂತ್ರಿಗಳ ವಿಡಿಯೋಗಳನ್ನು ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

8 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

8 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

8 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

9 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

9 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

9 hours ago