ರಾಜ್ಯ

ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್‌ ಮಾಡಿ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ; ಸಂತ್ರಸ್ಥೆ ಗಂಭೀರ ಆರೋಪ

ಬೆಂಗಳೂರು: ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಿ ಮಂತ್ರಿಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಅತ್ಯಾಚಾರ ದೂರು ನೀಡಿರುವ ಸಂತ್ರಸ್ಥೆ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್‌.9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸರ್ಕಾರದಿಂದ ಭದ್ರತೆ ಕೊಟ್ಟರೆ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಮತ್ತು ಅವರ ಸಂಬಂಧಿತ ವಿಡಿಯೋಗಳನ್ನು ನೀಡುತ್ತೇನೆ. ಇಲ್ಲವಾದರೆ ನೀಡಲು ಸಾಧ್ಯವಿಲ್ಲ ಏಕೆಂದರೆ ಮುನಿರತ್ನ ಅವರಿಂದ ಜೀವ ಬೆದರಿಕೆ ಆಗುವ ಸಂಭವವಿದೆ ಎಂದಿದ್ದಾರೆ. ಮುನಿರತ್ನ ಅವರ ಹತ್ತಿರ ಯಾವುದೇ ಮಾಧ್ಯಮಗಳ ಬಳಿ ಇಲ್ಲದತಂಹ ಅಡ್ವಾನ್ಸ್ಡ್‌ ಕ್ಯಾಮೆರಾಗಳಿವೆ. ಆ ಕ್ಯಾಮೆರಾಗಳ ಮೂಲಕ ಬೇರೆ ಮಹಿಳೆಯರನ್ನು ಬಳಸಿಕೊಂಡು ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಿರುವುದಲ್ಲದೆ, ಆ ವಿಡಿಯೋಗಳನ್ನು ಪೆನ್‌ಡ್ರೈವ್‌ಗಳಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದಾರೆ. ಆದರೆ, ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಲು ನನ್ನನ್ನು ಬಳಕೆ ಮಾಡಿಲ್ಲ ಎಂಬ ನಿಖರವಾದ ಹೇಳಿಕೆಯನ್ನು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡುವ ಸಂದರ್ಭದಲ್ಲಿ ಯಾವುದೇ ಸಿನಿಮಾ ನಟಿಯರನ್ನು ಬಳಸಿಕೊಂಡಿಲ್ಲ. ಅದರ ಬದಲಾಗಿ ಬೇರೆ ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಅಲ್ಲದೇ ಅನೇಕ ರಾಜಕೀಯ ನಾಯಕರನ್ನು ಹನಿಟ್ರ್ಯಾಪ್‌ ಮಾಡಲು ಸಹ ಬಳಸಿಕೊಂಡಿದ್ದಾರೆ. ಮುನಿರತ್ನ ಅವರು ಬಳಸಿಕೊಂಡಿರುವ ಸಂತ್ರಸ್ಥೆಯರು ಹೆದರಿಕೊಂಡು ಸಮ್ಮನಾಗಿದ್ದಾರೆ ಅಷ್ಟ. ಅದರ ಹೊರತಾಗಿ ಸಂತ್ರಸ್ಥ ಮಹಿಳೆಯರು ಕೂಡ ನನ್ನಂತೆಯೇ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು.

ಆರು ಮಂದಿಗೆ ಏಡ್ಸ್‌ ಸೋಂಕಿತರನ್ನು ಬಳಸಿ ಹನಿಟ್ರ್ಯಾಪ್‌

ಶಾಸಕ ಮುನಿರತ್ನ ಅವರು 6 ಮಂದಿ ಏಡ್ಸ್‌ ಸೋಂಕಿತ ಮಹಿಳೆಯರನ್ನು ಬಳಸಿಕೊಂಡು ಉನ್ನತ ಮಟ್ಟದ ಶಾಸಕರಿಗೆ, ಪೊಲೀಸ್‌ ಅಧಿಕಾರಿಗಳಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಹನಿಟ್ರ್ಯಾಪ್‌ ಮಾಡಿದ್ದಾರೆ. ಅಲ್ಲದೇ ಸುಮಾರು 20 ರಿಂದ 30 ರಾಜಕೀಯ ಮುಖಂಡರನ್ನು ಸಹ ಹನಿಟ್ರ್ಯಾಪ್‌ ಮಾಡಿ ಪೆನ್‌ಡ್ರೈವ್‌ನಲ್ಲಿ ವಿಡಿಯೋ ಸಂಗ್ರಹ ಮಾಡಿದ್ದಾರೆ. ಈ ವಿಡಿಯೋಗಳನ್ನು ಎಸ್‌ಐಟಿ ತಂಡ ನನ್ನನ್ನು ಮಾಹಿತಿ ಕೇಳಿದಾಗ ಅವರಿಗೆ ಮಾಜಿ ಮುಖ್ಯಮಂತ್ರಿಗಳ ವಿಡಿಯೋಗಳನ್ನು ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago