ರಾಜ್ಯ

ಮುನಿಯಪ್ಪ ಸಿಎಂ ಆದರೆ ಸಂತೋಷ ಪಡುತ್ತೇನೆ: ಸಚಿವ ಪರಮೇಶ್ವರ್‌

ಬೆಂಗಳೂರು: ಕೆ.ಎಚ್.ಮುನಿಯಪ್ಪ ಮುಖ್ಯಮಂತ್ರಿ ಆದರೆ ನಾನು ಸಂತೋಷ ಪಡುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಮುನಿಯಪ್ಪ ಹಿರಿಯರಿದ್ದಾರೆ. ಅವರು ಸಮರ್ಥರು. ತುಳಿತಕ್ಕೆ ಒಳಗಾಗಿರೋ ಸಮುದಾಯದಿಂದ ಬಂದವರು. ಮುನಿಯಪ್ಪ ಅವರು ಸಿಎಂ ಆದರೆ ತಪ್ಪೇನು ಎಂದು ಪ್ರಶ್ನೆ ಮಾಡಿದರು.

ಇದನ್ನು ಓದಿ: ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ: ಯತೀಂದ್ರ ಸಿದ್ದರಾಮಯ್ಯ

ಮುನಿಯಪ್ಪ ಸಿಎಂ ಆದರೆ ನಾನು ಸಂತೋಷ ಪಡುತ್ತೇನೆ. ಆದರೆ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್‌ನವರೇ ತೀರ್ಮಾನಿಸಬೇಕು. ಪ್ರಸ್ತುತ ಬಿಹಾರ ಚುನಾವಣೆಗೆ ಹೈಕಮಾಂಡ್‌ ತುಂಬಾ ಬ್ಯುಸಿ ಇದೆ ಎಂದರು.

ಇನ್ನು ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ಬಗ್ಗೆ ಮಾತುಗಳು ಕೇಳಿಬರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನವೆಂಬರ್‌ ಕ್ರಾಂತಿ ಬಗ್ಗೆ ನನಗೆ ಗೊತ್ತಿಲ್ಲ. ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತೋ ಅದರ ಬಗ್ಗೆಯೂ ನನಗೆ ಗೊತ್ತಿಲ್ಲ. ಏನೇ ಇದ್ದರೂ ಹೈಕಮಾಂಡ್‌ ನಿರ್ಧಾರವೇ ಅಂತಿಮ. ನಾವು ನಿತ್ಯ ಇಲ್ಲಿ ಮಾತನಾಡುವುದರಿಂದ ಗೊಂದಲ ಆಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

2 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

18 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

19 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

19 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 day ago