ಬೆಂಗಳೂರು: ಕೆ.ಎಚ್.ಮುನಿಯಪ್ಪ ಮುಖ್ಯಮಂತ್ರಿ ಆದರೆ ನಾನು ಸಂತೋಷ ಪಡುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಮುನಿಯಪ್ಪ ಹಿರಿಯರಿದ್ದಾರೆ. ಅವರು ಸಮರ್ಥರು. ತುಳಿತಕ್ಕೆ ಒಳಗಾಗಿರೋ ಸಮುದಾಯದಿಂದ ಬಂದವರು. ಮುನಿಯಪ್ಪ ಅವರು ಸಿಎಂ ಆದರೆ ತಪ್ಪೇನು ಎಂದು ಪ್ರಶ್ನೆ ಮಾಡಿದರು.
ಇದನ್ನು ಓದಿ: ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ: ಯತೀಂದ್ರ ಸಿದ್ದರಾಮಯ್ಯ
ಮುನಿಯಪ್ಪ ಸಿಎಂ ಆದರೆ ನಾನು ಸಂತೋಷ ಪಡುತ್ತೇನೆ. ಆದರೆ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ನವರೇ ತೀರ್ಮಾನಿಸಬೇಕು. ಪ್ರಸ್ತುತ ಬಿಹಾರ ಚುನಾವಣೆಗೆ ಹೈಕಮಾಂಡ್ ತುಂಬಾ ಬ್ಯುಸಿ ಇದೆ ಎಂದರು.
ಇನ್ನು ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಮಾತುಗಳು ಕೇಳಿಬರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ಬಗ್ಗೆ ನನಗೆ ಗೊತ್ತಿಲ್ಲ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಅದರ ಬಗ್ಗೆಯೂ ನನಗೆ ಗೊತ್ತಿಲ್ಲ. ಏನೇ ಇದ್ದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ನಾವು ನಿತ್ಯ ಇಲ್ಲಿ ಮಾತನಾಡುವುದರಿಂದ ಗೊಂದಲ ಆಗುತ್ತದೆ ಎಂದು ಹೇಳಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…