ಬೆಂಗಳೂರು: ಕೆ.ಎಚ್.ಮುನಿಯಪ್ಪ ಮುಖ್ಯಮಂತ್ರಿ ಆದರೆ ನಾನು ಸಂತೋಷ ಪಡುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಮುನಿಯಪ್ಪ ಹಿರಿಯರಿದ್ದಾರೆ. ಅವರು ಸಮರ್ಥರು. ತುಳಿತಕ್ಕೆ ಒಳಗಾಗಿರೋ ಸಮುದಾಯದಿಂದ ಬಂದವರು. ಮುನಿಯಪ್ಪ ಅವರು ಸಿಎಂ ಆದರೆ ತಪ್ಪೇನು ಎಂದು ಪ್ರಶ್ನೆ ಮಾಡಿದರು.
ಇದನ್ನು ಓದಿ: ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ: ಯತೀಂದ್ರ ಸಿದ್ದರಾಮಯ್ಯ
ಮುನಿಯಪ್ಪ ಸಿಎಂ ಆದರೆ ನಾನು ಸಂತೋಷ ಪಡುತ್ತೇನೆ. ಆದರೆ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ನವರೇ ತೀರ್ಮಾನಿಸಬೇಕು. ಪ್ರಸ್ತುತ ಬಿಹಾರ ಚುನಾವಣೆಗೆ ಹೈಕಮಾಂಡ್ ತುಂಬಾ ಬ್ಯುಸಿ ಇದೆ ಎಂದರು.
ಇನ್ನು ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಮಾತುಗಳು ಕೇಳಿಬರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ಬಗ್ಗೆ ನನಗೆ ಗೊತ್ತಿಲ್ಲ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಅದರ ಬಗ್ಗೆಯೂ ನನಗೆ ಗೊತ್ತಿಲ್ಲ. ಏನೇ ಇದ್ದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ನಾವು ನಿತ್ಯ ಇಲ್ಲಿ ಮಾತನಾಡುವುದರಿಂದ ಗೊಂದಲ ಆಗುತ್ತದೆ ಎಂದು ಹೇಳಿದರು.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…