ಬೆಂಗಳೂರು : ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಬಹಿರಂಗವಾಗಿಯೇ ಅಸಮಾಧಾನದ ಬಾಂಬ್ ಸಿಡಿಸಿದ್ದಾರೆ.
ದೇವನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಕಾಯ್ದುಕೊಂಡಿಲ್ಲ, ಈ ತಾರತಮ್ಯ ಹೀಗೆಯೇ ಮುಂದುವರಿದರೆ 2028ರ ಚುನಾವಣೆಯಲ್ಲಿ ಪಕ್ಷಕ್ಕೆ ಭಾರಿ ಕಷ್ಟವಾಗಲಿದೆ” ಎಂದು ಸ್ಫೋಟಕ ಎಚ್ಚರಿಕೆ ನೀಡಿದ್ದಾರೆ.
ಕಳೆದ ಮೂರು ವರ್ಷಗಳಿಂದ ಆಹಾರ ಇಲಾಖೆಯನ್ನು ನಿಭಾಯಿಸಿರುವ ತಮಗೆ ಮತ್ತೆ ಅದೇ ಖಾತೆ ನೀಡಿರುವುದಕ್ಕೆ ಕೆ.ಎಚ್. ಮುನಿಯಪ್ಪ ತೀವ್ರ ಬೇಸರ ಹೊರಹಾಕಿದ್ದಾರೆ. “ನಾನು ರಾಜಕೀಯದಲ್ಲಿ 8 ಬಾರಿ ಗೆದ್ದಿರುವ ಅತ್ಯಂತ ಹಿರಿಯ ನಾಯಕ. ಸಂಪುಟದಲ್ಲಿ ಪ್ರೊಟೊಕಾಲ್ ಪ್ರಕಾರ ಸೀನಿಯಾರಿಟಿ ನೋಡಿ ಖಾತೆ ಹಂಚಬೇಕಿತ್ತು. ಸಮಾಜ ಕಲ್ಯಾಣ ಅಥವಾ ಕೃಷಿ ಇಲಾಖೆಯಂತಹ ಜನಸೇವೆಗೆ ನೇರ ಅವಕಾಶವಿರುವ ದೊಡ್ಡ ಖಾತೆ ನೀಡುವಂತೆ ನಾನು ಮೊದಲೇ ಕೇಳಿದ್ದೆ. ಆದರೆ ಹಂಚಿಕೆಯಲ್ಲಿ ಯಾವುದೇ ಸಮಾತೋಲನ ಕಾಯ್ದುಕೊಂಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪಕ್ಷದ ನಾಯಕತ್ವದ ವಿರುದ್ಧ ಮಾರ್ಮಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, “ನಾನು ಪಕ್ಷದಲ್ಲಿ ತಾಯಿ ಸ್ಥಾನದಲ್ಲಿದ್ದೇನೆ. ತಾಯಿಯಾದವಳು ಎಲ್ಲಾ ಮಕ್ಕಳನ್ನೂ ಒಂದೇ ಕಣ್ಣಿನಿಂದ, ಸಮಾನವಾಗಿ ನೋಡಬೇಕು. ನಾನು ಈಗಾಗಲೇ ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಖುದ್ದಾಗಿ ಭೇಟಿಯಾಗಿ ಮನವಿ ಮಾಡಿದ್ದೇನೆ. ಗೊಂದಲಗಳಿಗೆ ಆಸ್ಪದ ನೀಡದೆ ನನ್ನ ಖಾತೆಯನ್ನು ತಕ್ಷಣ ಬದಲಾಯಿಸುತ್ತಾರೆ ಎಂಬ ನಂಬಿಕೆ ನನಗಿದೆ” ಎಂದಿದ್ದಾರೆ.
ಸಮಾಜ ಕಲ್ಯಾಣ, ಕೃಷಿ ಅಥವಾ ನೀರಾವರಿಯಂತಹ ಇಲಾಖೆಗಳನ್ನು ನೀಡಿದರೆ ಜನಸೇವೆ ಮತ್ತು ರೈತರಿಗೆ ಉತ್ತಮ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…