ರಾಜ್ಯ

ರಾಮಲಿಂಗರೆಡ್ಡಿ ಬೆನ್ನಲ್ಲೇ ಅಸಮಾಧಾನ ಹೊರ ಹಾಕಿದ ಮುನಿಯಪ್ಪ : ಬೇರೆ ಖಾತೆಗೆ ಬೇಡಿಕೆ

ಬೆಂಗಳೂರು : ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಬಹಿರಂಗವಾಗಿಯೇ ಅಸಮಾಧಾನದ ಬಾಂಬ್ ಸಿಡಿಸಿದ್ದಾರೆ.

ದೇವನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಕಾಯ್ದುಕೊಂಡಿಲ್ಲ, ಈ ತಾರತಮ್ಯ ಹೀಗೆಯೇ ಮುಂದುವರಿದರೆ 2028ರ ಚುನಾವಣೆಯಲ್ಲಿ ಪಕ್ಷಕ್ಕೆ ಭಾರಿ ಕಷ್ಟವಾಗಲಿದೆ” ಎಂದು ಸ್ಫೋಟಕ ಎಚ್ಚರಿಕೆ ನೀಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಆಹಾರ ಇಲಾಖೆಯನ್ನು ನಿಭಾಯಿಸಿರುವ ತಮಗೆ ಮತ್ತೆ ಅದೇ ಖಾತೆ ನೀಡಿರುವುದಕ್ಕೆ ಕೆ.ಎಚ್. ಮುನಿಯಪ್ಪ ತೀವ್ರ ಬೇಸರ ಹೊರಹಾಕಿದ್ದಾರೆ. “ನಾನು ರಾಜಕೀಯದಲ್ಲಿ 8 ಬಾರಿ ಗೆದ್ದಿರುವ ಅತ್ಯಂತ ಹಿರಿಯ ನಾಯಕ. ಸಂಪುಟದಲ್ಲಿ ಪ್ರೊಟೊಕಾಲ್ ಪ್ರಕಾರ ಸೀನಿಯಾರಿಟಿ ನೋಡಿ ಖಾತೆ ಹಂಚಬೇಕಿತ್ತು. ಸಮಾಜ ಕಲ್ಯಾಣ ಅಥವಾ ಕೃಷಿ ಇಲಾಖೆಯಂತಹ ಜನಸೇವೆಗೆ ನೇರ ಅವಕಾಶವಿರುವ ದೊಡ್ಡ ಖಾತೆ ನೀಡುವಂತೆ ನಾನು ಮೊದಲೇ ಕೇಳಿದ್ದೆ. ಆದರೆ ಹಂಚಿಕೆಯಲ್ಲಿ ಯಾವುದೇ ಸಮಾತೋಲನ ಕಾಯ್ದುಕೊಂಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪಕ್ಷದ ನಾಯಕತ್ವದ ವಿರುದ್ಧ ಮಾರ್ಮಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, “ನಾನು ಪಕ್ಷದಲ್ಲಿ ತಾಯಿ ಸ್ಥಾನದಲ್ಲಿದ್ದೇನೆ. ತಾಯಿಯಾದವಳು ಎಲ್ಲಾ ಮಕ್ಕಳನ್ನೂ ಒಂದೇ ಕಣ್ಣಿನಿಂದ, ಸಮಾನವಾಗಿ ನೋಡಬೇಕು. ನಾನು ಈಗಾಗಲೇ ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಖುದ್ದಾಗಿ ಭೇಟಿಯಾಗಿ ಮನವಿ ಮಾಡಿದ್ದೇನೆ. ಗೊಂದಲಗಳಿಗೆ ಆಸ್ಪದ ನೀಡದೆ ನನ್ನ ಖಾತೆಯನ್ನು ತಕ್ಷಣ ಬದಲಾಯಿಸುತ್ತಾರೆ ಎಂಬ ನಂಬಿಕೆ ನನಗಿದೆ” ಎಂದಿದ್ದಾರೆ.

ಸಮಾಜ ಕಲ್ಯಾಣ, ಕೃಷಿ ಅಥವಾ ನೀರಾವರಿಯಂತಹ ಇಲಾಖೆಗಳನ್ನು ನೀಡಿದರೆ ಜನಸೇವೆ ಮತ್ತು ರೈತರಿಗೆ ಉತ್ತಮ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

19 mins ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

2 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

3 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

5 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

6 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago