ರಾಜ್ಯ

ಕೊಲೆಯತ್ನ, ಸುಪಾರಿ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಕೊಲೆಯತ್ನ ಮತ್ತು ಸುಪಾರಿ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ಮತ್ತೊಂದು ಸಂಕಷ್ಟ ಎದುರಾಗಿದೆ.

ಇಂದು ಮಾಜಿ ಕಾರ್ಪೊರೇಟರ್‌ ಮಂಜುಳಾ ಎಂಬುವವರ ಪತಿ ನಾರಾಯಣಸ್ವಾಮಿ ಅವರು ನೀಡಿರುವ ದೂರಿನ ಆಧಾರದ ಮೇಲೆ ಶಾಸಕ ಮುನಿರತ್ನ ಹಾಗೂ ಇನ್ನಿತರರ ಮೇಲೆ ಕೊಲೆಯತ್ನ ಮತ್ತು ಸುಪಾರಿ ನೀಡಿರುವ ಆರೋಪದಡಿ ಎಫ್‌ಐಆರ್‌ ದಾಖಲಾಗಿದೆ.

ಶಾಸಕ ಮುನಿರತ್ನ ಜಾತಿನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದರು. ಆದರೆ ಇಂದೇ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಕೇಸ್‌ನಲ್ಲಿ 590 ಪುಟಗಳ ಚಾರ್ಜ್‌ಶೀಟ್‌ನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಮಧ್ಯೆಯೇ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಿಸಿ ಸಂಕಷ್ಟ ಎದುರಾಗುವಂತೆ ಮಾಡಿದ್ದಾರೆ.

ಈ ಮೂಲಕ ಶಾಸಕ ಮುನಿರತ್ನೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ಮುನಿರತ್ನ ಬಂಧನವಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಚನ ಎಸ್‌ ಎಸ್

Recent Posts

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

1 min ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

2 mins ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

3 mins ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

4 mins ago

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ವಿದ್ಯಾರ್ಥಿ ಜೀವನದ 2ನೇ ಅತಿ ಮಹತ್ವದ ಘಟ್ಟ ಎನಿಸಿದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ರಾಜ್ಯಾದ್ಯಂತ ನಾಳೆ ಪ್ರಕಟವಾಗಲಿದೆ.…

5 mins ago

ಗುಣಮಟ್ಟದ ಆಹಾರ ಮಾರಾಟ ಮಾಡದಿದ್ದಲ್ಲಿ ಪ್ರಕರಣ ದಾಖಲಿಸಿ: ಅಪರ ಜಿಲ್ಲಾಧಿಕಾರಿ ಡಾ.ಶಿವರಾಜು ಪಿ

ಮೈಸೂರು: ಸಾರ್ವಜನಿಕರು ಹಣ ನೀಡಿ ಆಹಾರ ಪದಾರ್ಥ ಖರೀದಿಸುತ್ತಾರೆ. ಅವರಿಗೆ ಗುಣಮಟ್ಟದ ಆಹಾರ ಪದಾರ್ಥ ನೀಡಬೇಕಿರುವುದು ಮಾರಾಟಗಾರರ ಕೆಲಸವಾಗಿರುತ್ತದೆ. ಆರೋಗ್ಯದ…

6 mins ago