ರಾಜ್ಯ

ಕೊಲೆಯತ್ನ, ಸುಪಾರಿ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಕೊಲೆಯತ್ನ ಮತ್ತು ಸುಪಾರಿ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ಮತ್ತೊಂದು ಸಂಕಷ್ಟ ಎದುರಾಗಿದೆ.

ಇಂದು ಮಾಜಿ ಕಾರ್ಪೊರೇಟರ್‌ ಮಂಜುಳಾ ಎಂಬುವವರ ಪತಿ ನಾರಾಯಣಸ್ವಾಮಿ ಅವರು ನೀಡಿರುವ ದೂರಿನ ಆಧಾರದ ಮೇಲೆ ಶಾಸಕ ಮುನಿರತ್ನ ಹಾಗೂ ಇನ್ನಿತರರ ಮೇಲೆ ಕೊಲೆಯತ್ನ ಮತ್ತು ಸುಪಾರಿ ನೀಡಿರುವ ಆರೋಪದಡಿ ಎಫ್‌ಐಆರ್‌ ದಾಖಲಾಗಿದೆ.

ಶಾಸಕ ಮುನಿರತ್ನ ಜಾತಿನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದರು. ಆದರೆ ಇಂದೇ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಕೇಸ್‌ನಲ್ಲಿ 590 ಪುಟಗಳ ಚಾರ್ಜ್‌ಶೀಟ್‌ನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಮಧ್ಯೆಯೇ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಿಸಿ ಸಂಕಷ್ಟ ಎದುರಾಗುವಂತೆ ಮಾಡಿದ್ದಾರೆ.

ಈ ಮೂಲಕ ಶಾಸಕ ಮುನಿರತ್ನೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ಮುನಿರತ್ನ ಬಂಧನವಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಚನ ಎಸ್‌ ಎಸ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

6 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

17 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago