ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ನಿಂದ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಈ ಮೂಲಕ ದರ್ಶನ್, ಪವಿತ್ರಗೌಡ ಹಾಗೂ ಇತರರಿಗೆ ಸಂಕಷ್ಟ ಎದುರಾಗೋ ಸಾಧ್ಯತೆ ಇದೆ.
ರೇಣುಕಾಸ್ವಾಮಿ ಹತ್ಯೆ ಕೇಸ್ದಲ್ಲಿ ದರ್ಶನ್ ಸೇರಿದಂತೆ ಇತರ ಆರೋಪಿಗಳನ್ನು ಇಂದು(ಜೂ.15) ಪೊಲೀಸರು ನ್ಯಾಯಾಧೀಶರ ಎದುರು ಹಾಜರುಪಡಿಸೋ ಸಾಧ್ಯತೆ ಇದೆ. ಕೋರಮಂಗಲದ ನ್ಯಾಯಾಧೀಶರ ನಿವಾಸದಲ್ಲಿ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ.
ದರ್ಶನ್ರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಪೊಲೀಸರು ದರ್ಶನ್ ವಿರುದ್ಧ ಇರುವ ಸಾಕ್ಷ್ಯಾಗಳನ್ನು ತಿಳಿಸಲಿದ್ದಾರೆ. ದರ್ಶನ್ ಪ್ರಭಾವಿ ವ್ಯಕ್ತಿ ಇವರನ್ನು ಒಮ್ಮೊ ಜೈಲಿನಿಂದ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿ ಉಂಟಾಗುತ್ತದೆ ಎಂದು ಪೊಲೀಸರು ನ್ಯಾಯಾಧೀಶರ ಎದುರು ಹೇಳಬಹುದು. ಆವಾಗ ನ್ಯಾಯಾಧೀಶರು ದರ್ಶನ್ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಕೊಲೆ ನಡೆದ ಸ್ಥಳ, ಮೃತದೇಹ ಪತ್ತೆಯಾದ ಸ್ಥಳ, ಅಪಹರಣವಾದ ಸ್ಥಳದಲ್ಲಿ ಮಹಜರು ಕೆಲಸ ಪೂರ್ಣಗೊಂಡಿದೆ. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಹೇಳಿಕೆಯನ್ನು ದಾಖಲು ಮಾಡಲಾಗಿದೆ. ತಾಂತ್ರಿಕ ಸಾಕ್ಷ್ಯಗಳ ಸಂಗ್ರಹ, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಹಾಗೂ ಸಾಂಧರ್ಭಿಕ ಸಾಕ್ಷ್ಯಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಹೀಗಾಗಿ ಇಂದೇ ಆರೋಪಿಗಳನ್ನು ನ್ಯಾಯಾಧೀಶ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…