ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ನಿಂದ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಈ ಮೂಲಕ ದರ್ಶನ್, ಪವಿತ್ರಗೌಡ ಹಾಗೂ ಇತರರಿಗೆ ಸಂಕಷ್ಟ ಎದುರಾಗೋ ಸಾಧ್ಯತೆ ಇದೆ.
ರೇಣುಕಾಸ್ವಾಮಿ ಹತ್ಯೆ ಕೇಸ್ದಲ್ಲಿ ದರ್ಶನ್ ಸೇರಿದಂತೆ ಇತರ ಆರೋಪಿಗಳನ್ನು ಇಂದು(ಜೂ.15) ಪೊಲೀಸರು ನ್ಯಾಯಾಧೀಶರ ಎದುರು ಹಾಜರುಪಡಿಸೋ ಸಾಧ್ಯತೆ ಇದೆ. ಕೋರಮಂಗಲದ ನ್ಯಾಯಾಧೀಶರ ನಿವಾಸದಲ್ಲಿ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ.
ದರ್ಶನ್ರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಪೊಲೀಸರು ದರ್ಶನ್ ವಿರುದ್ಧ ಇರುವ ಸಾಕ್ಷ್ಯಾಗಳನ್ನು ತಿಳಿಸಲಿದ್ದಾರೆ. ದರ್ಶನ್ ಪ್ರಭಾವಿ ವ್ಯಕ್ತಿ ಇವರನ್ನು ಒಮ್ಮೊ ಜೈಲಿನಿಂದ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿ ಉಂಟಾಗುತ್ತದೆ ಎಂದು ಪೊಲೀಸರು ನ್ಯಾಯಾಧೀಶರ ಎದುರು ಹೇಳಬಹುದು. ಆವಾಗ ನ್ಯಾಯಾಧೀಶರು ದರ್ಶನ್ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಕೊಲೆ ನಡೆದ ಸ್ಥಳ, ಮೃತದೇಹ ಪತ್ತೆಯಾದ ಸ್ಥಳ, ಅಪಹರಣವಾದ ಸ್ಥಳದಲ್ಲಿ ಮಹಜರು ಕೆಲಸ ಪೂರ್ಣಗೊಂಡಿದೆ. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಹೇಳಿಕೆಯನ್ನು ದಾಖಲು ಮಾಡಲಾಗಿದೆ. ತಾಂತ್ರಿಕ ಸಾಕ್ಷ್ಯಗಳ ಸಂಗ್ರಹ, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಹಾಗೂ ಸಾಂಧರ್ಭಿಕ ಸಾಕ್ಷ್ಯಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಹೀಗಾಗಿ ಇಂದೇ ಆರೋಪಿಗಳನ್ನು ನ್ಯಾಯಾಧೀಶ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…