ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ನಿಂದ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಈ ಮೂಲಕ ದರ್ಶನ್, ಪವಿತ್ರಗೌಡ ಹಾಗೂ ಇತರರಿಗೆ ಸಂಕಷ್ಟ ಎದುರಾಗೋ ಸಾಧ್ಯತೆ ಇದೆ.
ರೇಣುಕಾಸ್ವಾಮಿ ಹತ್ಯೆ ಕೇಸ್ದಲ್ಲಿ ದರ್ಶನ್ ಸೇರಿದಂತೆ ಇತರ ಆರೋಪಿಗಳನ್ನು ಇಂದು(ಜೂ.15) ಪೊಲೀಸರು ನ್ಯಾಯಾಧೀಶರ ಎದುರು ಹಾಜರುಪಡಿಸೋ ಸಾಧ್ಯತೆ ಇದೆ. ಕೋರಮಂಗಲದ ನ್ಯಾಯಾಧೀಶರ ನಿವಾಸದಲ್ಲಿ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ.
ದರ್ಶನ್ರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಪೊಲೀಸರು ದರ್ಶನ್ ವಿರುದ್ಧ ಇರುವ ಸಾಕ್ಷ್ಯಾಗಳನ್ನು ತಿಳಿಸಲಿದ್ದಾರೆ. ದರ್ಶನ್ ಪ್ರಭಾವಿ ವ್ಯಕ್ತಿ ಇವರನ್ನು ಒಮ್ಮೊ ಜೈಲಿನಿಂದ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿ ಉಂಟಾಗುತ್ತದೆ ಎಂದು ಪೊಲೀಸರು ನ್ಯಾಯಾಧೀಶರ ಎದುರು ಹೇಳಬಹುದು. ಆವಾಗ ನ್ಯಾಯಾಧೀಶರು ದರ್ಶನ್ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಕೊಲೆ ನಡೆದ ಸ್ಥಳ, ಮೃತದೇಹ ಪತ್ತೆಯಾದ ಸ್ಥಳ, ಅಪಹರಣವಾದ ಸ್ಥಳದಲ್ಲಿ ಮಹಜರು ಕೆಲಸ ಪೂರ್ಣಗೊಂಡಿದೆ. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಹೇಳಿಕೆಯನ್ನು ದಾಖಲು ಮಾಡಲಾಗಿದೆ. ತಾಂತ್ರಿಕ ಸಾಕ್ಷ್ಯಗಳ ಸಂಗ್ರಹ, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಹಾಗೂ ಸಾಂಧರ್ಭಿಕ ಸಾಕ್ಷ್ಯಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಹೀಗಾಗಿ ಇಂದೇ ಆರೋಪಿಗಳನ್ನು ನ್ಯಾಯಾಧೀಶ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…