ರಾಜ್ಯ

ಧರ್ಮಸ್ಥಳದಲ್ಲಿ ಕೊಲೆ, ಅತ್ಯಾಚಾರ : ಎಸ್‌ಐಟಿ ರಚನೆಗೆ ಹೆಚ್ಚಿದ ಒತ್ತಾಯ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪಾರ ಸಂಖ್ಯೆಯ ಅತ್ಯಾಚಾರ, ಕೊಲೆ ಮತ್ತು ಹೆಣಗಳನ್ನು ಹೂಳಿರುವ ಪ್ರಕರಣದಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು ಸರಿಯಾದ ರೀತಿ ತನಿಖೆ ನಡೆಯುತ್ತಿಲ್ಲ. ಸಾಕ್ಷಿ, ಪಿರ್ಯಾದುದಾರರ ಹೇಳಿಕೆ ಲೀಕ್ ಆಗ್ತಾ ಇದೆ. ಫಿರ್ಯಾದುದಾರ ಸಾಕ್ಷಿಗೆ ರಾಜ್ಯ ಸರ್ಕಾರ ತಕ್ಷಣವೇ ಭದ್ರತೆ ಒದಗಿಸಬೇಕು. ಆರೋಪಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೋಪಾಲಗೌಡ ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಪ್ರಕರಣ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಯುತ್ತಿಲ್ಲ, ಕೂಡಲೇ ಸರ್ಕಾರ ಪ್ರಮಾಣಿಕ ಅಧಿಕಾರಿಗಳ ಒಳಗೊಂಡ ಎಸ್‌ಐಟಿ ರಚನೆ ಮಾಡಬೇಕು ಎಸ್‌ಐಟಿ ತನಿಖೆಯನ್ನು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಮಾಡಬೇಕೆಂದು ಮನವಿ ಮಾಡಿದರು.

ಸಾಕ್ಷಿ, ಪಿರ್ಯಾದುದಾರರ ಬಳಿ ಸಾಕ್ಷಿಗಳು ಇವೆ. ಮೂರು ವಾರವಾದರೂ ಸಾಕ್ಷಿ ಪಿರ್ಯಾದುದಾರ ಹೇಳಿಕೆ ಪಡೆದು ಸರಿಯಾಗಿ ತನಿಖೆ ಮಾಡುತ್ತಿಲ್ಲ. ಇದರ ಹಿಂದೆ ಕಾಣದ ಶಕ್ತಿಗಳು ಇವೆ ಎಂದು ಆರೋಪಿಸಿದರು.

ಧರ್ಮಸ್ಥಳಕ್ಕೆ ಕೋಟ್ಯಾಂತರ ಭಕ್ತರು ಹೋಗುತ್ತಾ ಇದ್ದಾರೆ. ಹತ್ಯೆಗಳು ನಡೆದಿದೆ ಎಂದು ಒಬ್ಬ ಹೇಳುವಾಗ ತೀರ ಮಂದಗತಿ ಕಾರ್ಯ ಸೂಕ್ತ ಅಲ್ಲ. ಸರ್ಕಾರವನ್ನು ಸರಿಯಾದ ರೀತಿ ತೆಗೆದುಕೊಂಡು ಹೋಗುವ ಕೆಲಸ ಮಾಧ್ಯಮ ಮಾಡಬೇಕಿದೆ. ಈ ಪ್ರಕರಣವನ್ನು ಮುಂದೆ ತೆಗೆದುಕೊಂಡು ಹೋಗುವ ಕೆಲಸವನ್ನು ಮಾಧ್ಯಮಗಳು ಮಾಡಬೇಕಿದೆ, ತಪ್ಪಿತಸ್ಥರನ್ನು ಹುಡುಕಿ ಸತ್ಯಶೋಧನೆ ಮಾಡಬೇಕಿದೆ ಎಂದರು.

ಸತ್ಯಶೋಧನೆ ಮಾಡಬೇಕಿದೆ
ನಾನೊಬ್ಬ ನಿವೃತ್ತ ನ್ಯಾಯಮೂರ್ತಿ ಆಗಿ ಈ ಅನ್ಯಾಯ ನೋಡಿ ಪ್ರತಿಕ್ರಿಯಿಸಿದ್ದೇನೆ. ಕಾನೂನಿನ ಅನ್ವಯ ಸತ್ಯ ಶೋಧನೆ ಮಾಡಬೇಕಿದೆ. 100 ಮೃತ ದೇಹಗಳ ಹೂತು ಹಾಕಲಾಗಿದೆ ಎಂಬ ಮಾಹಿತಿ ಇದೆ. ಸಾಕ್ಷಿ ಪಿರ್ಯಾದುದಾರನಿಗೂ ಒತ್ತಡ ಹಾಕಲಾಗುತ್ತಿದೆ ಎಂದು ಅವನೇ ಹೇಳುತ್ತಾ ಇದ್ದಾನೆ. ಹೀಗಾಗಿ ಸಾಕ್ಷಿ ಪಿರ್ಯಾದುದಾರರನಿಗೆ ಭದ್ರತೆ ನೀಡಬೇಕು. ಈತನಿಗೆ ಏನಾದರೂ ಆದರೆ ಡಿಜಿಪಿ, ಗೃಹಸಚಿವರು ಕಾರಣ ಆಗುತ್ತಾರೆ ಎಂದರು.

ವಕೀಲರಿಗೂ ಬೆದರಿಕೆ
ಸಾಕ್ಷಿ ಪರವಾಗಿ ನಿಂತ ವಕೀಲರಿಗೂ ಬೆದರಿಕೆ ಹಾಕುತ್ತಾ ಇದ್ದಾರೆ. ಸಾಕ್ಷಿ, ವಕೀಲರಿಗೆ ತೊಂದರೆ ಆದರೆ ಡಿಜಿಪಿ, ಗೃಹಸಚಿವರು ಕಾರಣ ಆಗ್ತಾರೆ. ಸುದ್ದಿಗಳಿಗೆ ಪ್ರತಿಭಂದಕಾಜ್ಞೆ ಏಕೆ ತರುತ್ತಾ ಇದ್ದರೆ ಎಂದು ಗೊತ್ತಾಗುತ್ತಿಲ್ಲ. ಯಾರು ತರ್ತಾ ಇದ್ದಾರೆ ಅನ್ನೋದು ಮುಖ್ಯ ವಿಚಾರ. ಮೂಲಭೂತ ಹಕ್ಕನ್ನ ಕಿತ್ತುಕೊಳ್ಳುವ ಕೆಲಸ ಮಾಡಬಾರದು. ವಾಕ್ ಸ್ವಾತಂತ್ರ್ಯ ಮಿತಿಮೀರಿದಾಗ ಮಾತ್ರ ಪ್ರತಿಬಂಧ ಹೇರಬಹುದು. ಸಾಕ್ಷಿ ಪಿರ್ಯಾದುದಾರ ಹೇಳುವ ಹೇಳಿಕೆ ಸುದ್ದಿ ಮಾಡುವುದನ್ನು ನಿರ್ಬಂಧ ಹೇರಬಾರದು. ಪತ್ರಿಕಾ ಸ್ವಾತಂತ್ರ್ಯಕ್ಕೆ ತೊಂದರೆ ಹಾಕುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.

367 ಸಂತ್ರಸ್ತೆಯರು
ಧರ್ಮಸ್ಥಳದಲ್ಲಿ 367 ಬಾಲಕಿಯರು ಮತ್ತು ಯುವತಿಯರು ಅಪರಿಚಿತ ಶವಗಳಾಗಿ ಪತ್ತೆಯಾಗಿದ್ದಾರೆ. ಪತ್ತೆಯಾಗದ ಶವಗಳೂ ಇನ್ನೂ ಇರುವ ಶಂಕೆಯಿದೆ. ಅವರೆಲ್ಲರಿಗೂ ನ್ಯಾಯ ಸಿಗಬೇಕಾದರೆ ತನಿಖೆ ನಡೆಯಬೇಕು ಎಂದು ವಕೀಲ ಎಸ್.ಬಾಲನ್‌ ಒತ್ತಾಯಿಸಿದರು.

 

 

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

4 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

4 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

5 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

5 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

6 hours ago