ರಾಜ್ಯ

ಧರ್ಮಸ್ಥಳದಲ್ಲಿ ಕೊಲೆ, ಅತ್ಯಾಚಾರ : ಎಸ್‌ಐಟಿ ರಚನೆಗೆ ಹೆಚ್ಚಿದ ಒತ್ತಾಯ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪಾರ ಸಂಖ್ಯೆಯ ಅತ್ಯಾಚಾರ, ಕೊಲೆ ಮತ್ತು ಹೆಣಗಳನ್ನು ಹೂಳಿರುವ ಪ್ರಕರಣದಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು ಸರಿಯಾದ ರೀತಿ ತನಿಖೆ ನಡೆಯುತ್ತಿಲ್ಲ. ಸಾಕ್ಷಿ, ಪಿರ್ಯಾದುದಾರರ ಹೇಳಿಕೆ ಲೀಕ್ ಆಗ್ತಾ ಇದೆ. ಫಿರ್ಯಾದುದಾರ ಸಾಕ್ಷಿಗೆ ರಾಜ್ಯ ಸರ್ಕಾರ ತಕ್ಷಣವೇ ಭದ್ರತೆ ಒದಗಿಸಬೇಕು. ಆರೋಪಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೋಪಾಲಗೌಡ ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಪ್ರಕರಣ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಯುತ್ತಿಲ್ಲ, ಕೂಡಲೇ ಸರ್ಕಾರ ಪ್ರಮಾಣಿಕ ಅಧಿಕಾರಿಗಳ ಒಳಗೊಂಡ ಎಸ್‌ಐಟಿ ರಚನೆ ಮಾಡಬೇಕು ಎಸ್‌ಐಟಿ ತನಿಖೆಯನ್ನು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಮಾಡಬೇಕೆಂದು ಮನವಿ ಮಾಡಿದರು.

ಸಾಕ್ಷಿ, ಪಿರ್ಯಾದುದಾರರ ಬಳಿ ಸಾಕ್ಷಿಗಳು ಇವೆ. ಮೂರು ವಾರವಾದರೂ ಸಾಕ್ಷಿ ಪಿರ್ಯಾದುದಾರ ಹೇಳಿಕೆ ಪಡೆದು ಸರಿಯಾಗಿ ತನಿಖೆ ಮಾಡುತ್ತಿಲ್ಲ. ಇದರ ಹಿಂದೆ ಕಾಣದ ಶಕ್ತಿಗಳು ಇವೆ ಎಂದು ಆರೋಪಿಸಿದರು.

ಧರ್ಮಸ್ಥಳಕ್ಕೆ ಕೋಟ್ಯಾಂತರ ಭಕ್ತರು ಹೋಗುತ್ತಾ ಇದ್ದಾರೆ. ಹತ್ಯೆಗಳು ನಡೆದಿದೆ ಎಂದು ಒಬ್ಬ ಹೇಳುವಾಗ ತೀರ ಮಂದಗತಿ ಕಾರ್ಯ ಸೂಕ್ತ ಅಲ್ಲ. ಸರ್ಕಾರವನ್ನು ಸರಿಯಾದ ರೀತಿ ತೆಗೆದುಕೊಂಡು ಹೋಗುವ ಕೆಲಸ ಮಾಧ್ಯಮ ಮಾಡಬೇಕಿದೆ. ಈ ಪ್ರಕರಣವನ್ನು ಮುಂದೆ ತೆಗೆದುಕೊಂಡು ಹೋಗುವ ಕೆಲಸವನ್ನು ಮಾಧ್ಯಮಗಳು ಮಾಡಬೇಕಿದೆ, ತಪ್ಪಿತಸ್ಥರನ್ನು ಹುಡುಕಿ ಸತ್ಯಶೋಧನೆ ಮಾಡಬೇಕಿದೆ ಎಂದರು.

ಸತ್ಯಶೋಧನೆ ಮಾಡಬೇಕಿದೆ
ನಾನೊಬ್ಬ ನಿವೃತ್ತ ನ್ಯಾಯಮೂರ್ತಿ ಆಗಿ ಈ ಅನ್ಯಾಯ ನೋಡಿ ಪ್ರತಿಕ್ರಿಯಿಸಿದ್ದೇನೆ. ಕಾನೂನಿನ ಅನ್ವಯ ಸತ್ಯ ಶೋಧನೆ ಮಾಡಬೇಕಿದೆ. 100 ಮೃತ ದೇಹಗಳ ಹೂತು ಹಾಕಲಾಗಿದೆ ಎಂಬ ಮಾಹಿತಿ ಇದೆ. ಸಾಕ್ಷಿ ಪಿರ್ಯಾದುದಾರನಿಗೂ ಒತ್ತಡ ಹಾಕಲಾಗುತ್ತಿದೆ ಎಂದು ಅವನೇ ಹೇಳುತ್ತಾ ಇದ್ದಾನೆ. ಹೀಗಾಗಿ ಸಾಕ್ಷಿ ಪಿರ್ಯಾದುದಾರರನಿಗೆ ಭದ್ರತೆ ನೀಡಬೇಕು. ಈತನಿಗೆ ಏನಾದರೂ ಆದರೆ ಡಿಜಿಪಿ, ಗೃಹಸಚಿವರು ಕಾರಣ ಆಗುತ್ತಾರೆ ಎಂದರು.

ವಕೀಲರಿಗೂ ಬೆದರಿಕೆ
ಸಾಕ್ಷಿ ಪರವಾಗಿ ನಿಂತ ವಕೀಲರಿಗೂ ಬೆದರಿಕೆ ಹಾಕುತ್ತಾ ಇದ್ದಾರೆ. ಸಾಕ್ಷಿ, ವಕೀಲರಿಗೆ ತೊಂದರೆ ಆದರೆ ಡಿಜಿಪಿ, ಗೃಹಸಚಿವರು ಕಾರಣ ಆಗ್ತಾರೆ. ಸುದ್ದಿಗಳಿಗೆ ಪ್ರತಿಭಂದಕಾಜ್ಞೆ ಏಕೆ ತರುತ್ತಾ ಇದ್ದರೆ ಎಂದು ಗೊತ್ತಾಗುತ್ತಿಲ್ಲ. ಯಾರು ತರ್ತಾ ಇದ್ದಾರೆ ಅನ್ನೋದು ಮುಖ್ಯ ವಿಚಾರ. ಮೂಲಭೂತ ಹಕ್ಕನ್ನ ಕಿತ್ತುಕೊಳ್ಳುವ ಕೆಲಸ ಮಾಡಬಾರದು. ವಾಕ್ ಸ್ವಾತಂತ್ರ್ಯ ಮಿತಿಮೀರಿದಾಗ ಮಾತ್ರ ಪ್ರತಿಬಂಧ ಹೇರಬಹುದು. ಸಾಕ್ಷಿ ಪಿರ್ಯಾದುದಾರ ಹೇಳುವ ಹೇಳಿಕೆ ಸುದ್ದಿ ಮಾಡುವುದನ್ನು ನಿರ್ಬಂಧ ಹೇರಬಾರದು. ಪತ್ರಿಕಾ ಸ್ವಾತಂತ್ರ್ಯಕ್ಕೆ ತೊಂದರೆ ಹಾಕುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.

367 ಸಂತ್ರಸ್ತೆಯರು
ಧರ್ಮಸ್ಥಳದಲ್ಲಿ 367 ಬಾಲಕಿಯರು ಮತ್ತು ಯುವತಿಯರು ಅಪರಿಚಿತ ಶವಗಳಾಗಿ ಪತ್ತೆಯಾಗಿದ್ದಾರೆ. ಪತ್ತೆಯಾಗದ ಶವಗಳೂ ಇನ್ನೂ ಇರುವ ಶಂಕೆಯಿದೆ. ಅವರೆಲ್ಲರಿಗೂ ನ್ಯಾಯ ಸಿಗಬೇಕಾದರೆ ತನಿಖೆ ನಡೆಯಬೇಕು ಎಂದು ವಕೀಲ ಎಸ್.ಬಾಲನ್‌ ಒತ್ತಾಯಿಸಿದರು.

 

 

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

9 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

9 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

9 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

9 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

10 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago