ರಾಜ್ಯ

ವಿದ್ಯಾರ್ಥಿಗಳು ನೀರು ಪಾಲು: ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುರುಡೇಶ್ವರದಲ್ಲಿ ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ನೀರು ಪಾಲಾಗಿ ಸಾವನ್ನಪಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳನ್ನು ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ನನಗೆ ಆಘಾತವಾಯಿತು. ಹೀಗಾಗಿ ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹಾಗೂ ವಿದ್ಯಾರ್ಥಿಗಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಬಗ್ಗೆ ಹೆಚ್ಚು ಜಾಗೃತಿವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡುವಾಗ ವಿದ್ಯಾರ್ಥಿಗಳ ಮೇಲೆ ನಿಗಾ ಇಡಬೇಕು. ವಿದ್ಯಾರ್ಥಿಗಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

1 hour ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

1 hour ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

1 hour ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

1 hour ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

1 hour ago