ಬೆಂಗಳೂರು: ಮುರುಡೇಶ್ವರದಲ್ಲಿ ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ನೀರು ಪಾಲಾಗಿ ಸಾವನ್ನಪಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳನ್ನು ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ನನಗೆ ಆಘಾತವಾಯಿತು. ಹೀಗಾಗಿ ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹಾಗೂ ವಿದ್ಯಾರ್ಥಿಗಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಬಗ್ಗೆ ಹೆಚ್ಚು ಜಾಗೃತಿವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡುವಾಗ ವಿದ್ಯಾರ್ಥಿಗಳ ಮೇಲೆ ನಿಗಾ ಇಡಬೇಕು. ವಿದ್ಯಾರ್ಥಿಗಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…