ರಾಜ್ಯ

ಪೋಕ್ಸೋ‌ ಪ್ರಕರಣದಲ್ಲಿ‌ ಮುರುಘಾ ಶ್ರೀ‌ ನಿರ್ದೋಷಿ

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರಿಕುಳ ನೀಡಿದ ಪ್ರಕರಣದಲ್ಲಿ ಚಿತ್ರದುರ್ಗ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸಿಗೊಳಿಸಿದೆ.

ಇದರಿಂದ ಸ್ವಾಮೀಜಿ ಕೊಂಚ ನಿರಾಳರಾಗಿದ್ದಾರೆ. ಇನ್ನೊಂದು ಪ್ರಕರಣವು ವಿಚಾರಣೆಗೆ ಬಾಕಿ ಇದ್ದು, ಕರ್ನಾಟಕ ಹೈಕೋರ್ಟ್‌ ಅದಕ್ಕೆ ತಡೆ ನೀಡಿದೆ.

ಇದನ್ನು ಓದಿ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್:‌ ಇಂದು ಮಧ್ಯಾಹ್ನ ತೀರ್ಪು ಪ್ರಕಟ

ಈ ಮಧ್ಯೆ, ಸ್ವಾಮೀಜಿಯು ಜಾಮೀನನ ಮೇಲೆ ಹೊರಗಿದ್ದಾರೆ. ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್‌ ಷರತ್ತು ವಿಧಿಸಿದೆ. ಮಠದ ಹಾಸ್ಟೆಲ್‌ನಲ್ಲಿ ನೆಲೆಸಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸ್ವಾಮೀಜಿ ಅವರು ಸೇಬಿನ ಹಣ್ಣಿಗೆ ಮಾದಕ ವಸ್ತು ಲೇಪಿಸಿ ನೀಡಿ, ಅತ್ಯಾಚಾರ ಎಸಗಿದ್ದರು ಎಂದು ದೂರು ನೀಡಿದ್ದರು. ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ್ದ ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ್‌ ಚನ್ನಬಸಪ್ಪ ಹಡಪದ ಅವರು ತೀರ್ಪು ಪ್ರಕಟಿಸಿದರು. ನವೆಂಬರ್‌ 18ರಂದು ನ್ಯಾಯಾಲಯವು ತೀರ್ಪು ಕಾಯ್ದಿರಿಸಿತ್ತು.

ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರು ಆರೋಪಿಗಳನ್ನು ನ್ಯಾಯಾಲಯವು ನಿರ್ದೋಷಿಗಳು ಎಂದು ತೀರ್ಪು ನೀಡಿದೆ” ಎಂದು ಸ್ವಾಮೀಜಿ ಪರ ವಕೀಲ ಕೆಬಿಕೆ ಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

19 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

43 mins ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

51 mins ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

2 hours ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

3 hours ago