ರಾಜ್ಯ

ಪೋಕ್ಸೋ‌ ಪ್ರಕರಣದಲ್ಲಿ‌ ಮುರುಘಾ ಶ್ರೀ‌ ನಿರ್ದೋಷಿ

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರಿಕುಳ ನೀಡಿದ ಪ್ರಕರಣದಲ್ಲಿ ಚಿತ್ರದುರ್ಗ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸಿಗೊಳಿಸಿದೆ.

ಇದರಿಂದ ಸ್ವಾಮೀಜಿ ಕೊಂಚ ನಿರಾಳರಾಗಿದ್ದಾರೆ. ಇನ್ನೊಂದು ಪ್ರಕರಣವು ವಿಚಾರಣೆಗೆ ಬಾಕಿ ಇದ್ದು, ಕರ್ನಾಟಕ ಹೈಕೋರ್ಟ್‌ ಅದಕ್ಕೆ ತಡೆ ನೀಡಿದೆ.

ಇದನ್ನು ಓದಿ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್:‌ ಇಂದು ಮಧ್ಯಾಹ್ನ ತೀರ್ಪು ಪ್ರಕಟ

ಈ ಮಧ್ಯೆ, ಸ್ವಾಮೀಜಿಯು ಜಾಮೀನನ ಮೇಲೆ ಹೊರಗಿದ್ದಾರೆ. ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್‌ ಷರತ್ತು ವಿಧಿಸಿದೆ. ಮಠದ ಹಾಸ್ಟೆಲ್‌ನಲ್ಲಿ ನೆಲೆಸಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸ್ವಾಮೀಜಿ ಅವರು ಸೇಬಿನ ಹಣ್ಣಿಗೆ ಮಾದಕ ವಸ್ತು ಲೇಪಿಸಿ ನೀಡಿ, ಅತ್ಯಾಚಾರ ಎಸಗಿದ್ದರು ಎಂದು ದೂರು ನೀಡಿದ್ದರು. ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ್ದ ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ್‌ ಚನ್ನಬಸಪ್ಪ ಹಡಪದ ಅವರು ತೀರ್ಪು ಪ್ರಕಟಿಸಿದರು. ನವೆಂಬರ್‌ 18ರಂದು ನ್ಯಾಯಾಲಯವು ತೀರ್ಪು ಕಾಯ್ದಿರಿಸಿತ್ತು.

ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರು ಆರೋಪಿಗಳನ್ನು ನ್ಯಾಯಾಲಯವು ನಿರ್ದೋಷಿಗಳು ಎಂದು ತೀರ್ಪು ನೀಡಿದೆ” ಎಂದು ಸ್ವಾಮೀಜಿ ಪರ ವಕೀಲ ಕೆಬಿಕೆ ಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

11 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

11 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

11 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

12 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

12 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

12 hours ago