ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರಿಕುಳ ನೀಡಿದ ಪ್ರಕರಣದಲ್ಲಿ ಚಿತ್ರದುರ್ಗ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸಿಗೊಳಿಸಿದೆ.
ಇದರಿಂದ ಸ್ವಾಮೀಜಿ ಕೊಂಚ ನಿರಾಳರಾಗಿದ್ದಾರೆ. ಇನ್ನೊಂದು ಪ್ರಕರಣವು ವಿಚಾರಣೆಗೆ ಬಾಕಿ ಇದ್ದು, ಕರ್ನಾಟಕ ಹೈಕೋರ್ಟ್ ಅದಕ್ಕೆ ತಡೆ ನೀಡಿದೆ.
ಇದನ್ನು ಓದಿ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್: ಇಂದು ಮಧ್ಯಾಹ್ನ ತೀರ್ಪು ಪ್ರಕಟ
ಈ ಮಧ್ಯೆ, ಸ್ವಾಮೀಜಿಯು ಜಾಮೀನನ ಮೇಲೆ ಹೊರಗಿದ್ದಾರೆ. ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ. ಮಠದ ಹಾಸ್ಟೆಲ್ನಲ್ಲಿ ನೆಲೆಸಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸ್ವಾಮೀಜಿ ಅವರು ಸೇಬಿನ ಹಣ್ಣಿಗೆ ಮಾದಕ ವಸ್ತು ಲೇಪಿಸಿ ನೀಡಿ, ಅತ್ಯಾಚಾರ ಎಸಗಿದ್ದರು ಎಂದು ದೂರು ನೀಡಿದ್ದರು. ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ್ದ ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ್ ಚನ್ನಬಸಪ್ಪ ಹಡಪದ ಅವರು ತೀರ್ಪು ಪ್ರಕಟಿಸಿದರು. ನವೆಂಬರ್ 18ರಂದು ನ್ಯಾಯಾಲಯವು ತೀರ್ಪು ಕಾಯ್ದಿರಿಸಿತ್ತು.
ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರು ಆರೋಪಿಗಳನ್ನು ನ್ಯಾಯಾಲಯವು ನಿರ್ದೋಷಿಗಳು ಎಂದು ತೀರ್ಪು ನೀಡಿದೆ” ಎಂದು ಸ್ವಾಮೀಜಿ ಪರ ವಕೀಲ ಕೆಬಿಕೆ ಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…