ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಸ್ಪರ್ಧೆ ಖಚಿತ ಎಂದ ಶಾಸಕ ಯತ್ನಾಳ್‌

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ನನ್ನ ಸ್ಪರ್ಧೆ ಖಚಿತ, ನಾನೇ ಗೆಲುವು ಕೂಡ ಖಚಿತ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿ ನಿಷ್ಠಾವಂತರ ಗುಂಪಿನ ಕೋರ್‌ ಕಮಿಟಿಯಲ್ಲಿ ನನ್ನ ಹೆಸರು ಅಂತಿಮವಾದರೆ ಸ್ಪರ್ಧಿಸುವೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ರೆಡಿ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಉಸ್ತುವಾರಿ ಸಭೆಗೆ ನಾನು ಹೋಗಿಲ್ಲ. ಅಲ್ಲಿ 600 ಶಾಸಕರ ಬೆಂಬಲ ಇದೆ. ಅಲ್ಲಿ ನಮಗೇನು ಕೆಲಸ. 600 ಶಾಸಕರು, 1500 ಸಂಸದರು, 2000 ಎಂಎಲ್‌ಸಿಗಳ ಬೆಂಬಲ ಇದೆ ಎಂದು ವ್ಯಂಗ್ಯವಾಡಿದರು.

ಯತ್ನಾಳ್‌, ಜಾರಕಿಹೊಳಿ ಹಿಂದೆ ಯಾವ ಮಗಾ ಇದ್ದಾನೆ? ಅದಕ್ಕೆ ನಾವು ಹೋಗಿಲ್ಲ. ಕಾರ್ಯಕರ್ತರ ಹುರುಪು ಆಗುವಂತೆ ಅಧ್ಯಕ್ಷರಾಗಬೇಕು. ರಾತ್ರಿ ಡಿಕೆಶಿ ಮನೆಯಲ್ಲಿ ಮುಂಜಾನೆ ಸಿದ್ದರಾಮಯ್ಯ ಮನೆ. ಮತ್ತೆ ಬೆಳಿಗ್ಗೆ 11ಕ್ಕೆ ಬೋಲೋ ಭಾರತ್‌ ಮಾತಾಕೀ ಜೈ ಎಂದರೆ ಹೇಗೆ ಎಂದು ವಿಜಯೇಂದ್ರರನ್ನು ಕುಟುಕಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

2 mins ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

17 mins ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

11 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

11 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

14 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

14 hours ago