ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಸತೀಶ್ಗೆ ಇಂಥ ಪರಿಸ್ಥಿತಿ ಬಂದಿದೆ. ಬೇರೆ ಯಾರಾದರೂ ಸಿಎಂ ಆದರೆ ಸತೀಶ್ ಪರಿಸ್ಥಿತಿ ಏನು? ಎಂದು ಶಾಸಕ ರಮೇಶ್ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಳಗಾವಿಗೆ ಆಗಮಿಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ನಲ್ಲಿ ಬಂಡಾಯವಿದೆ ಎಂದಾಗ ಕೆಲವರು ನನ್ನನ್ನು ಟೀಕಿಸಿದರು. ಅವರಿಗೆ ಈಗ ವಾಸ್ತವ ಗೊತ್ತಾಗಿದೆ. ಸತೀಶ್ ನಡೆಯಿಂದ ಇಂದು ಉತ್ತರ ಸಿಕ್ಕಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಮುಕ್ತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಕೆಲವರು ಅವರನ್ನು ಕಟ್ಟಿ ಹಾಕಿದ್ದಾರೆ. 2013ರಲ್ಲಿ ಸಿಎಂ ಆಗಿದ್ದಾಗ ಕಾಣಿಸುತ್ತಿದ್ದ ಸಿದ್ದರಾಮಯ್ಯನವರ ಮಾತಿನ ದರ್ಪ, ದಕ್ಷತೆ ಈಗ ಕಾಣುತ್ತಿಲ್ಲ. ಅವರು ಯಾಕೆ ಸೈಲೆಂಟ್ ಆಗಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದು ಅವರು ಹೇಳಿದರು.
ಜಗದೀಶ ಶೆಟ್ಟರ್ ಅವರು ಎಲ್ಲಿದ್ದರೂ ನಮ್ಮ ಹಿರಿಯರು. ಅವರನ್ನು ನಾನು ಹಲವಾರು ಸಲ ಭೇಟಿಯಾಗಿದ್ದೇನೆ. ಈ ಸಲ ಅವರ ಭೇಟಿಯ ವಿಚಾರ ಲೀಕ್ ಆಗಿದೆ. ಅವರು ಬಿಜೆಪಿ ಬಿಡಬಾರದಿತ್ತು. ಅವರೊಂದಿಗೆ ರಾಜಕೀಯ ಚರ್ಚೆ ನಡೆಸಿಲ್ಲ. ವೈಯಕ್ತಿಕ ವಿಚಾರಕ್ಕೆ ಭೇಟಿಯಾಗಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…
ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…