ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಸತೀಶ್ಗೆ ಇಂಥ ಪರಿಸ್ಥಿತಿ ಬಂದಿದೆ. ಬೇರೆ ಯಾರಾದರೂ ಸಿಎಂ ಆದರೆ ಸತೀಶ್ ಪರಿಸ್ಥಿತಿ ಏನು? ಎಂದು ಶಾಸಕ ರಮೇಶ್ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಳಗಾವಿಗೆ ಆಗಮಿಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ನಲ್ಲಿ ಬಂಡಾಯವಿದೆ ಎಂದಾಗ ಕೆಲವರು ನನ್ನನ್ನು ಟೀಕಿಸಿದರು. ಅವರಿಗೆ ಈಗ ವಾಸ್ತವ ಗೊತ್ತಾಗಿದೆ. ಸತೀಶ್ ನಡೆಯಿಂದ ಇಂದು ಉತ್ತರ ಸಿಕ್ಕಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಮುಕ್ತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಕೆಲವರು ಅವರನ್ನು ಕಟ್ಟಿ ಹಾಕಿದ್ದಾರೆ. 2013ರಲ್ಲಿ ಸಿಎಂ ಆಗಿದ್ದಾಗ ಕಾಣಿಸುತ್ತಿದ್ದ ಸಿದ್ದರಾಮಯ್ಯನವರ ಮಾತಿನ ದರ್ಪ, ದಕ್ಷತೆ ಈಗ ಕಾಣುತ್ತಿಲ್ಲ. ಅವರು ಯಾಕೆ ಸೈಲೆಂಟ್ ಆಗಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದು ಅವರು ಹೇಳಿದರು.
ಜಗದೀಶ ಶೆಟ್ಟರ್ ಅವರು ಎಲ್ಲಿದ್ದರೂ ನಮ್ಮ ಹಿರಿಯರು. ಅವರನ್ನು ನಾನು ಹಲವಾರು ಸಲ ಭೇಟಿಯಾಗಿದ್ದೇನೆ. ಈ ಸಲ ಅವರ ಭೇಟಿಯ ವಿಚಾರ ಲೀಕ್ ಆಗಿದೆ. ಅವರು ಬಿಜೆಪಿ ಬಿಡಬಾರದಿತ್ತು. ಅವರೊಂದಿಗೆ ರಾಜಕೀಯ ಚರ್ಚೆ ನಡೆಸಿಲ್ಲ. ವೈಯಕ್ತಿಕ ವಿಚಾರಕ್ಕೆ ಭೇಟಿಯಾಗಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…