ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಸತೀಶ್ಗೆ ಇಂಥ ಪರಿಸ್ಥಿತಿ ಬಂದಿದೆ. ಬೇರೆ ಯಾರಾದರೂ ಸಿಎಂ ಆದರೆ ಸತೀಶ್ ಪರಿಸ್ಥಿತಿ ಏನು? ಎಂದು ಶಾಸಕ ರಮೇಶ್ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಳಗಾವಿಗೆ ಆಗಮಿಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ನಲ್ಲಿ ಬಂಡಾಯವಿದೆ ಎಂದಾಗ ಕೆಲವರು ನನ್ನನ್ನು ಟೀಕಿಸಿದರು. ಅವರಿಗೆ ಈಗ ವಾಸ್ತವ ಗೊತ್ತಾಗಿದೆ. ಸತೀಶ್ ನಡೆಯಿಂದ ಇಂದು ಉತ್ತರ ಸಿಕ್ಕಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಮುಕ್ತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಕೆಲವರು ಅವರನ್ನು ಕಟ್ಟಿ ಹಾಕಿದ್ದಾರೆ. 2013ರಲ್ಲಿ ಸಿಎಂ ಆಗಿದ್ದಾಗ ಕಾಣಿಸುತ್ತಿದ್ದ ಸಿದ್ದರಾಮಯ್ಯನವರ ಮಾತಿನ ದರ್ಪ, ದಕ್ಷತೆ ಈಗ ಕಾಣುತ್ತಿಲ್ಲ. ಅವರು ಯಾಕೆ ಸೈಲೆಂಟ್ ಆಗಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದು ಅವರು ಹೇಳಿದರು.
ಜಗದೀಶ ಶೆಟ್ಟರ್ ಅವರು ಎಲ್ಲಿದ್ದರೂ ನಮ್ಮ ಹಿರಿಯರು. ಅವರನ್ನು ನಾನು ಹಲವಾರು ಸಲ ಭೇಟಿಯಾಗಿದ್ದೇನೆ. ಈ ಸಲ ಅವರ ಭೇಟಿಯ ವಿಚಾರ ಲೀಕ್ ಆಗಿದೆ. ಅವರು ಬಿಜೆಪಿ ಬಿಡಬಾರದಿತ್ತು. ಅವರೊಂದಿಗೆ ರಾಜಕೀಯ ಚರ್ಚೆ ನಡೆಸಿಲ್ಲ. ವೈಯಕ್ತಿಕ ವಿಚಾರಕ್ಕೆ ಭೇಟಿಯಾಗಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…