Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

2028ಕ್ಕೆ ಮತ್ತೆ ನಮ್ಮ ಸರ್ಕಾರ ತರುವುದು ನನ್ನ ಜವಾಬ್ದಾರಿ: ಡಿಕೆ ಶಿವಕುಮಾರ್‌

ಬೆಂಗಳೂರು: 2028ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ. ನಾನು ಸಿದ್ದರಾಮಯ್ಯ ಅವರು ಎಲ್ಲ ಸಚಿವ ಸಂಪುಟ ಸದಸ್ಯರು ಒಟ್ಟಾಗಿ ದುಡಿದು ಈ ಸರ್ಕಾರ ಮತ್ತೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದರು.

ಒಕ್ಕಲಿಗ ನಾಯಕರ ಸಭೆ  ಬಗ್ಗೆ ಶುಕ್ರವಾರ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಲೋಕಸಭಾ ಚುನಾವಣೆ ಮತದಾನದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು. ಸೋತಿದ್ದು, ಸೋಲನ್ನು ಒಪ್ಪಿದ್ದೇವೆ. ರಾಜಕಾರಣದಲ್ಲಿ ಸೋಲು, ಗೆಲುವು ಸಹಜ ಎಂದರು.

ನಮ್ಮ ಚಲುವರಾಯಸ್ವಾಮಿ, ಬಾಲಕೃಷ್ಣ 50 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಈಗ ಅವರು ಮತ್ತೆ ಗೆದ್ದಿದ್ದಾರೆ. ಈ ಸೋಲು ಶಾಶ್ವತವಲ್ಲ. ಜನರ ಭಾವನೆ, ಆಲೋಚನೆ ಆರು ತಿಂಗಳಿಗೆ ಬದಲಾಗುತ್ತದೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷ 1 ಸ್ಥಾನ ಗೆದ್ದಿತ್ತು. ಈಗ 9 ಸ್ಥಾನ ಗೆದ್ದಿದೆ. ಇನ್ನು ನಾಲ್ಕೈದು ಕ್ಷೇತ್ರ ನಾವು ನಿರೀಕ್ಷೆ ಮಾಡಿದ್ದೇವೆ ಆದರೆ ಅದು ಕೈತಪ್ಪಿದೆ.  2028 ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ ಎಂದು ಹೇಳಿದರು.

Tags:
error: Content is protected !!