ಬೆಂಗಳೂರು: 2028ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ. ನಾನು ಸಿದ್ದರಾಮಯ್ಯ ಅವರು ಎಲ್ಲ ಸಚಿವ ಸಂಪುಟ ಸದಸ್ಯರು ಒಟ್ಟಾಗಿ ದುಡಿದು ಈ ಸರ್ಕಾರ ಮತ್ತೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಒಕ್ಕಲಿಗ ನಾಯಕರ ಸಭೆ ಬಗ್ಗೆ ಶುಕ್ರವಾರ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಲೋಕಸಭಾ ಚುನಾವಣೆ ಮತದಾನದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು. ಸೋತಿದ್ದು, ಸೋಲನ್ನು ಒಪ್ಪಿದ್ದೇವೆ. ರಾಜಕಾರಣದಲ್ಲಿ ಸೋಲು, ಗೆಲುವು ಸಹಜ ಎಂದರು.
ನಮ್ಮ ಚಲುವರಾಯಸ್ವಾಮಿ, ಬಾಲಕೃಷ್ಣ 50 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಈಗ ಅವರು ಮತ್ತೆ ಗೆದ್ದಿದ್ದಾರೆ. ಈ ಸೋಲು ಶಾಶ್ವತವಲ್ಲ. ಜನರ ಭಾವನೆ, ಆಲೋಚನೆ ಆರು ತಿಂಗಳಿಗೆ ಬದಲಾಗುತ್ತದೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷ 1 ಸ್ಥಾನ ಗೆದ್ದಿತ್ತು. ಈಗ 9 ಸ್ಥಾನ ಗೆದ್ದಿದೆ. ಇನ್ನು ನಾಲ್ಕೈದು ಕ್ಷೇತ್ರ ನಾವು ನಿರೀಕ್ಷೆ ಮಾಡಿದ್ದೇವೆ ಆದರೆ ಅದು ಕೈತಪ್ಪಿದೆ. 2028 ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ ಎಂದು ಹೇಳಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…