ರಾಜ್ಯ

ಮೈಸೂರು | BDA ಮಾದರಿ MDA ಮಸೂದೆ ಮಂಡನೆ ಅಂಗೀಕಾರ

ಬೆಳಗಾವಿ: 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ.

ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಗುರುವಾರ ವಿಧಾನ ಸಭೆ ಕಲಾಪದಲ್ಲಿ, 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ ಸದನದ ಮುಂದೆ ಮಂಡಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆಗಾಗಿ ವಿಧೇಯಕವನ್ನು ರಚನೆ ಮಾಡಲಾಗಿದೆ. ಪ್ರಾಧಿಕಾರಕ್ಕೆ ಹಿರಿಯ ಶ್ರೇಣಿ ಐ.ಎ.ಎಸ್ ಅಧಿಕಾರಿಯನ್ನು ಆಯಕ್ತರನ್ನಾಗಿ ನೇಮಿಸಲು ಅವಕಾಶ ನೀಡಲಾಗಿದೆ. ಪ್ರಾಧಿಕಾರ ಸದಸ್ಯತ್ವದ ನೇಮಕಕ್ಕೂ ತಿದ್ದುಪಡಿ ತಂದು ಸರ್ಕಾರಕ್ಕೆ ಸದಸ್ಯರ ನೇಮಕ ಮಾಡಲು ಅಧಿಕಾರ ನೀಡಲಾಗಿದೆ.

ಮೈಸೂರು ಪರಾಂಪರಿಕ ಮಹತ್ವ ಕಾಪಾಡಲು ಪ್ರಾಧಿಕಾರದ ಅಡಿ ಪರಾಂಪರಿಕ ಕಟ್ಟಡಗಳ ರಕ್ಷಣಾ ಸಮಿತಿ ರಚನೆ ಮಾಡಲಾಗುವುದು ಎಂದು ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.

ಶಾಸಕರಾದ ತಮ್ಮಣ್ಣ, ಭೈರತಿ ಸುರೇಶ್, ಎಸ್.ಟಿ.ಸೋಮಶೇಖರ್,ಟಿ.ಎಸ್.ಶ್ರೀವತ್ಸ, ಜಿ.ಟಿ.ದೇವೇಗೌಡ, ವಿ.ಸುನಿಲ್ ಕುಮಾರ್, ಹೆಚ್.ಡಿ.ರೇವಣ್ಣ ವಿಧೇಯಕ ಕುರಿತು ಚರ್ಚಿಸಿದರು.

ನಂತರ ವಿಧಾನ ಸಭೆಯಲ್ಲಿ ಧ್ವನಿ ಮತದ ಮೂಲಕ ಹಲವು ತಿದ್ದಪಡಿಯೊಂದಿಗೆ ವಿಧೇಯಕವನ್ನು ಅಂಗೀಕರಿಸಲಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಶ್ಮೀರದಲ್ಲಿ ಭರ್ಜರಿ ಬೇಟೆಯಾಡಿದ ಭಾರತೀಯ ಸೇನೆ: ಐವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಬೇಹಿಬಾಗ್‌…

9 mins ago

ಅಪರಿಚಿತ ವಾಹನ ಡಿಕ್ಕಿ: ಜಿಂಕೆ ಸಾವು

ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ…

28 mins ago

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಗೆ ತಮಿಳು ನಟ ವಿಜಯ್‌ ಆಕ್ರೋಶ

ಚೆನ್ನೈ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ಕುರಿತು ತಮಿಳು…

53 mins ago

ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಸಿಹಿ ಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಾಳೆಯಿಂದ ಆರಂಭವಾಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ…

1 hour ago

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾದ ಸಕ್ಕರೆ ನಾಡು ಮಂಡ್ಯ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ…

2 hours ago

ಓದುಗರ ಪತ್ರ: ಆ..ಹಾರ!

ಯಾವುದಾದರೂ ಕವನ ವಾಚಿಸಿ, ಏನಾದರೂ ಆಹಾರ ತಿನ್ನಿ ಎಂದವಳು ಹೇಳಿದಳು ಕವಿರಾಯರಿಗೆ ಕಿವಿಮಾತು! ಸಮ್ಮೇಳನದಿಂದ ಬರುವಾಗ ಆ..ಹಾರ, ಶಾಲು, ಸ್ಮರಣಿಕೆಗಳ…

2 hours ago