ಬೆಳಗಾವಿ: 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ.
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಗುರುವಾರ ವಿಧಾನ ಸಭೆ ಕಲಾಪದಲ್ಲಿ, 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ ಸದನದ ಮುಂದೆ ಮಂಡಿಸಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆಗಾಗಿ ವಿಧೇಯಕವನ್ನು ರಚನೆ ಮಾಡಲಾಗಿದೆ. ಪ್ರಾಧಿಕಾರಕ್ಕೆ ಹಿರಿಯ ಶ್ರೇಣಿ ಐ.ಎ.ಎಸ್ ಅಧಿಕಾರಿಯನ್ನು ಆಯಕ್ತರನ್ನಾಗಿ ನೇಮಿಸಲು ಅವಕಾಶ ನೀಡಲಾಗಿದೆ. ಪ್ರಾಧಿಕಾರ ಸದಸ್ಯತ್ವದ ನೇಮಕಕ್ಕೂ ತಿದ್ದುಪಡಿ ತಂದು ಸರ್ಕಾರಕ್ಕೆ ಸದಸ್ಯರ ನೇಮಕ ಮಾಡಲು ಅಧಿಕಾರ ನೀಡಲಾಗಿದೆ.
ಮೈಸೂರು ಪರಾಂಪರಿಕ ಮಹತ್ವ ಕಾಪಾಡಲು ಪ್ರಾಧಿಕಾರದ ಅಡಿ ಪರಾಂಪರಿಕ ಕಟ್ಟಡಗಳ ರಕ್ಷಣಾ ಸಮಿತಿ ರಚನೆ ಮಾಡಲಾಗುವುದು ಎಂದು ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.
ಶಾಸಕರಾದ ತಮ್ಮಣ್ಣ, ಭೈರತಿ ಸುರೇಶ್, ಎಸ್.ಟಿ.ಸೋಮಶೇಖರ್,ಟಿ.ಎಸ್.ಶ್ರೀವತ್ಸ, ಜಿ.ಟಿ.ದೇವೇಗೌಡ, ವಿ.ಸುನಿಲ್ ಕುಮಾರ್, ಹೆಚ್.ಡಿ.ರೇವಣ್ಣ ವಿಧೇಯಕ ಕುರಿತು ಚರ್ಚಿಸಿದರು.
ನಂತರ ವಿಧಾನ ಸಭೆಯಲ್ಲಿ ಧ್ವನಿ ಮತದ ಮೂಲಕ ಹಲವು ತಿದ್ದಪಡಿಯೊಂದಿಗೆ ವಿಧೇಯಕವನ್ನು ಅಂಗೀಕರಿಸಲಾಯಿತು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…