ಬೆಳಗಾವಿ: 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ.
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಗುರುವಾರ ವಿಧಾನ ಸಭೆ ಕಲಾಪದಲ್ಲಿ, 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ ಸದನದ ಮುಂದೆ ಮಂಡಿಸಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆಗಾಗಿ ವಿಧೇಯಕವನ್ನು ರಚನೆ ಮಾಡಲಾಗಿದೆ. ಪ್ರಾಧಿಕಾರಕ್ಕೆ ಹಿರಿಯ ಶ್ರೇಣಿ ಐ.ಎ.ಎಸ್ ಅಧಿಕಾರಿಯನ್ನು ಆಯಕ್ತರನ್ನಾಗಿ ನೇಮಿಸಲು ಅವಕಾಶ ನೀಡಲಾಗಿದೆ. ಪ್ರಾಧಿಕಾರ ಸದಸ್ಯತ್ವದ ನೇಮಕಕ್ಕೂ ತಿದ್ದುಪಡಿ ತಂದು ಸರ್ಕಾರಕ್ಕೆ ಸದಸ್ಯರ ನೇಮಕ ಮಾಡಲು ಅಧಿಕಾರ ನೀಡಲಾಗಿದೆ.
ಮೈಸೂರು ಪರಾಂಪರಿಕ ಮಹತ್ವ ಕಾಪಾಡಲು ಪ್ರಾಧಿಕಾರದ ಅಡಿ ಪರಾಂಪರಿಕ ಕಟ್ಟಡಗಳ ರಕ್ಷಣಾ ಸಮಿತಿ ರಚನೆ ಮಾಡಲಾಗುವುದು ಎಂದು ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.
ಶಾಸಕರಾದ ತಮ್ಮಣ್ಣ, ಭೈರತಿ ಸುರೇಶ್, ಎಸ್.ಟಿ.ಸೋಮಶೇಖರ್,ಟಿ.ಎಸ್.ಶ್ರೀವತ್ಸ, ಜಿ.ಟಿ.ದೇವೇಗೌಡ, ವಿ.ಸುನಿಲ್ ಕುಮಾರ್, ಹೆಚ್.ಡಿ.ರೇವಣ್ಣ ವಿಧೇಯಕ ಕುರಿತು ಚರ್ಚಿಸಿದರು.
ನಂತರ ವಿಧಾನ ಸಭೆಯಲ್ಲಿ ಧ್ವನಿ ಮತದ ಮೂಲಕ ಹಲವು ತಿದ್ದಪಡಿಯೊಂದಿಗೆ ವಿಧೇಯಕವನ್ನು ಅಂಗೀಕರಿಸಲಾಯಿತು.
ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…
ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…