ಬೆಂಗಳೂರು: ಮೈಸೂರು – ಬೆಳಗಾವಿ ನಡುವೆ ನಿತ್ಯ ಸಂಚಾರ ನಡೆಸುವ ಎಕ್ಸ್ಪ್ರೆಸ್ ರೈಲಿನ ವೇಗವನ್ನು ಹೆಚ್ಚಿಸಲಾಗಿದೆ. ಇಂದಿನಿಂದ (ಜನವರಿ 1) ಈ ರೈಲು 45 ನಿಮಿಷ ವೇಗವಾಗಿ ಚಲಿಸಿ ಬೆಳಗಾವಿ ತಲುಪಲಿದೆ.
ರೈಲು ಸಂಖ್ಯೆ 17301 ಮೈಸೂರು ಬೆಳಗಾವಿ ಎಕ್ಸ್ಪ್ರೆಸ್ ಈ ಹಿಂದೆ ಮೈಸೂರಿನಿಂದ ಬೆಳಗಾವಿಗೆ ಪ್ರಯಾಣಿಸಲು 12 ಗಂಟೆ ತೆಗೆದುಕೊಳ್ಳುತ್ತದೆ. ಸದ್ಯ 11 ಗಂಟೆ 15 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಮೈಸೂರಿನಿಂದ ಹಾವೇರಿವರೆಗೂ ರೈಲು ವೇಳಾಪಟ್ಟಿ ಬದಲಾವಣೆಯಾಗಿದ್ದು, ಹುಬ್ಬಳ್ಳಿ ಮತ್ತು ಧಾರವಾಡ ರೈಲು ನಿಲ್ದಾಣಗಳಲ್ಲಿ ರೈಲಿನ ಆಗಮನ/ನಿರ್ಗಮನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.
ಮೈಸೂರು ರೈಲು ನಿಲ್ದಾಣದಿಂದ ರಾತ್ರಿ 9:30 ಕ್ಕೆ ಹೊರಟು ಮರುದಿನ ಬೆಳಿಗ್ಗೆ 8:45 ಕ್ಕೆ ಬೆಳಗಾವಿ ರೈಲು ನಿಲ್ದಾಣವನ್ನು ತಲುಪುತ್ತದೆ. ಈ ರೈಲು ಮಾರ್ಗಮಧ್ಯೆ ಬೆಳಿಗ್ಗೆ 5:10 ಕ್ಕೆ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಆಗಮಿಸುತ್ತದೆ. ಇನ್ನು ಮಾರ್ಗ ಮಧ್ಯ ಉಳಿದ ನಿಲ್ದಾಣಗಳಲ್ಲಿ 15 ರಿಂದ 20 ನಿಮಿಷ ಸಮಯ ವ್ಯತ್ಯಾಸವಾಗಿದೆ. ಉಳಿದಂತೆ ಬೆಳಗಾವಿ – ಮೈಸೂರು ಎಕ್ಸ್ಪ್ರೆಸ್ ವೇಳಾಪಟ್ಟಿಯಲ್ಲಿ ವ್ಯತ್ಯಾಸ ಇಲ್ಲ.
ಮೈಸೂರು – ಬೆಳಗಾವಿ ಎಕ್ಸ್ಪ್ರೆಸ್ ವೇಳಾಪಟ್ಟಿ
ಮೈಸೂರು – 9.30ಕ್ಕೆ ನಿರ್ಗಮನ.
ಕೆಆರ್ನಗರ – 10.04
ಹೊಳೆನರಸೀಪುರ – 10.56
ಹಾನಸ – 11.30
ಅರಸೀಕೆರೆ – 12.08
ಕಡೂರು – 12.49
ಬೀರೂರು – 12.57
ಚಿಕ್ಕಜಾಜೂರು – 1.44
ದಾವಣಗೆರೆ – 2.20
ಹರಿಹರ – 2.36
ರಾಣೆಬೆನ್ನೂರು – 2.58
ಬ್ಯಾಡಗಿ – 3.19
ಹಾವೇರಿ – 3.35
ಯಲವಿಗಿ -4.05 (ಬೆಳಿಗ್ಗೆ)
ಹುಬ್ಬಳ್ಳಿ – 5.10
ಧಾರವಾಡ – 5.48
ಅಳ್ನಾವರ – 6.29
ಲೋಂಡಾ – 7.12
ಖಾನಾಪೂರ – 7.38
ಬೆಳಗಾವಿ – 8.45
136 ವರ್ಷಗಳಿಂದ ರೈಲು ಸೇವೆ: ”ಬೆಳಗಾವಿಯಲ್ಲಿ ರೈಲು ಸಂಚಾರ 1887ರಲ್ಲಿಆರಂಭಗೊಂಡಿದೆ. ಲೋಂಡಾ- ಬೆಳಗಾವಿ ಮಾರ್ಗದಲ್ಲಿ1887ರ ಮಾರ್ಚ್ 21ರಂದು ಹಾಗೂ ಬೆಳಗಾವಿ- ಮಿರಜ್ ಮಾರ್ಗದಲ್ಲಿಅದೇ ವರ್ಷ ಡಿ.22 ರಂದು ಮೊದಲ ರೈಲು ಸಂಚಾರ ನಡೆಸಿದೆ. ಈ ಭಾಗದಲ್ಲಿ136 ವರ್ಷಗಳಿಂದ ರೈಲು ಸೇವೆ ಇರುವುದು ವಿಶೇಷ. ದಿ.ಸುರೇಶ ಅಂಗಡಿ ಅವರು ಕೇಂದ್ರ ಸಚಿವರಾಗಿದ್ದ ವೇಳೆ ಬೆಳಗಾವಿ ರೈಲ್ವೇ ನಿಲ್ದಾಣಕ್ಕೆ 210 ಕೋಟಿ ರೂ.ಅನುದಾನ ತಂದು ಅಭಿವೃದ್ಧಿಗೆ ಶ್ರಮಿಸಿದ್ದರು,” ಎಂದು ಸಂಸದೆ ಮಂಗಲ ಅಂಗಡಿ ಹೇಳಿದರು.
ಮಂಗಳೂರು: ಮಾರ್ಚ್.3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…
ಬೆಂಗಳೂರು: ಕಾಂಗ್ರೆಸ್ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…
ಬೆಂಗಳೂರು: ಮಾರ್ಚ್.3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…
ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ…
ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…