ರಾಜ್ಯ

ವೇಗ ಹೆಚ್ಚಿಸಿಕೊಂಡ ಮೈಸೂರು – ಬೆಳಗಾವಿ ಎಕ್ಸ್‌ಪ್ರೆಸ್‌ ರೈಲು

ಬೆಂಗಳೂರು: ಮೈಸೂರು – ಬೆಳಗಾವಿ ನಡುವೆ ನಿತ್ಯ ಸಂಚಾರ ನಡೆಸುವ ಎಕ್ಸ್‌ಪ್ರೆಸ್‌ ರೈಲಿನ ವೇಗವನ್ನು ಹೆಚ್ಚಿಸಲಾಗಿದೆ. ಇಂದಿನಿಂದ (ಜನವರಿ 1) ಈ ರೈಲು 45 ನಿಮಿಷ ವೇಗವಾಗಿ ಚಲಿಸಿ ಬೆಳಗಾವಿ ತಲುಪಲಿದೆ.

ರೈಲು ಸಂಖ್ಯೆ 17301 ಮೈಸೂರು ಬೆಳಗಾವಿ ಎಕ್ಸ್‌ಪ್ರೆಸ್ ಈ ಹಿಂದೆ ಮೈಸೂರಿನಿಂದ ಬೆಳಗಾವಿಗೆ ಪ್ರಯಾಣಿಸಲು 12 ಗಂಟೆ ತೆಗೆದುಕೊಳ್ಳುತ್ತದೆ. ಸದ್ಯ 11 ಗಂಟೆ 15 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಮೈಸೂರಿನಿಂದ ಹಾವೇರಿವರೆಗೂ ರೈಲು ವೇಳಾಪಟ್ಟಿ ಬದಲಾವಣೆಯಾಗಿದ್ದು, ಹುಬ್ಬಳ್ಳಿ ಮತ್ತು ಧಾರವಾಡ ರೈಲು ನಿಲ್ದಾಣಗಳಲ್ಲಿ ರೈಲಿನ ಆಗಮನ/ನಿರ್ಗಮನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.

ಮೈಸೂರು ರೈಲು ನಿಲ್ದಾಣದಿಂದ ರಾತ್ರಿ 9:30 ಕ್ಕೆ ಹೊರಟು ಮರುದಿನ ಬೆಳಿಗ್ಗೆ 8:45 ಕ್ಕೆ ಬೆಳಗಾವಿ ರೈಲು ನಿಲ್ದಾಣವನ್ನು ತಲುಪುತ್ತದೆ. ಈ ರೈಲು ಮಾರ್ಗಮಧ್ಯೆ ಬೆಳಿಗ್ಗೆ 5:10 ಕ್ಕೆ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಆಗಮಿಸುತ್ತದೆ. ಇನ್ನು ಮಾರ್ಗ ಮಧ್ಯ ಉಳಿದ ನಿಲ್ದಾಣಗಳಲ್ಲಿ 15 ರಿಂದ 20 ನಿಮಿಷ ಸಮಯ ವ್ಯತ್ಯಾಸವಾಗಿದೆ. ಉಳಿದಂತೆ ಬೆಳಗಾವಿ – ಮೈಸೂರು ಎಕ್ಸ್‌ಪ್ರೆಸ್‌ ವೇಳಾಪಟ್ಟಿಯಲ್ಲಿ ವ್ಯತ್ಯಾಸ ಇಲ್ಲ.

ಮೈಸೂರು – ಬೆಳಗಾವಿ ಎಕ್ಸ್‌ಪ್ರೆಸ್‌ ವೇಳಾಪಟ್ಟಿ
ಮೈಸೂರು – 9.30ಕ್ಕೆ ನಿರ್ಗಮನ.
ಕೆಆರ್‌ನಗರ – 10.04
ಹೊಳೆನರಸೀಪುರ – 10.56
ಹಾನಸ – 11.30
ಅರಸೀಕೆರೆ – 12.08
ಕಡೂರು – 12.49
ಬೀರೂರು – 12.57
ಚಿಕ್ಕಜಾಜೂರು – 1.44
ದಾವಣಗೆರೆ – 2.20
ಹರಿಹರ – 2.36
ರಾಣೆಬೆನ್ನೂರು – 2.58
ಬ್ಯಾಡಗಿ – 3.19
ಹಾವೇರಿ – 3.35
ಯಲವಿಗಿ -4.05 (ಬೆಳಿಗ್ಗೆ)
ಹುಬ್ಬಳ್ಳಿ – 5.10
ಧಾರವಾಡ – 5.48
ಅಳ್ನಾವರ – 6.29
ಲೋಂಡಾ – 7.12
ಖಾನಾಪೂರ – 7.38
ಬೆಳಗಾವಿ – 8.45

136 ವರ್ಷಗಳಿಂದ ರೈಲು ಸೇವೆ: ”ಬೆಳಗಾವಿಯಲ್ಲಿ ರೈಲು ಸಂಚಾರ 1887ರಲ್ಲಿಆರಂಭಗೊಂಡಿದೆ. ಲೋಂಡಾ- ಬೆಳಗಾವಿ ಮಾರ್ಗದಲ್ಲಿ1887ರ ಮಾರ್ಚ್ 21ರಂದು ಹಾಗೂ ಬೆಳಗಾವಿ- ಮಿರಜ್‌ ಮಾರ್ಗದಲ್ಲಿಅದೇ ವರ್ಷ ಡಿ.22 ರಂದು ಮೊದಲ ರೈಲು ಸಂಚಾರ ನಡೆಸಿದೆ. ಈ ಭಾಗದಲ್ಲಿ136 ವರ್ಷಗಳಿಂದ ರೈಲು ಸೇವೆ ಇರುವುದು ವಿಶೇಷ. ದಿ.ಸುರೇಶ ಅಂಗಡಿ ಅವರು ಕೇಂದ್ರ ಸಚಿವರಾಗಿದ್ದ ವೇಳೆ ಬೆಳಗಾವಿ ರೈಲ್ವೇ ನಿಲ್ದಾಣಕ್ಕೆ 210 ಕೋಟಿ ರೂ.ಅನುದಾನ ತಂದು ಅಭಿವೃದ್ಧಿಗೆ ಶ್ರಮಿಸಿದ್ದರು,” ಎಂದು ಸಂಸದೆ ಮಂಗಲ ಅಂಗಡಿ ಹೇಳಿದರು.

andolanait

Recent Posts

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

51 mins ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

1 hour ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

2 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

2 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

2 hours ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

3 hours ago