ರಾಜ್ಯ

ವೇಗ ಹೆಚ್ಚಿಸಿಕೊಂಡ ಮೈಸೂರು – ಬೆಳಗಾವಿ ಎಕ್ಸ್‌ಪ್ರೆಸ್‌ ರೈಲು

ಬೆಂಗಳೂರು: ಮೈಸೂರು – ಬೆಳಗಾವಿ ನಡುವೆ ನಿತ್ಯ ಸಂಚಾರ ನಡೆಸುವ ಎಕ್ಸ್‌ಪ್ರೆಸ್‌ ರೈಲಿನ ವೇಗವನ್ನು ಹೆಚ್ಚಿಸಲಾಗಿದೆ. ಇಂದಿನಿಂದ (ಜನವರಿ 1) ಈ ರೈಲು 45 ನಿಮಿಷ ವೇಗವಾಗಿ ಚಲಿಸಿ ಬೆಳಗಾವಿ ತಲುಪಲಿದೆ.

ರೈಲು ಸಂಖ್ಯೆ 17301 ಮೈಸೂರು ಬೆಳಗಾವಿ ಎಕ್ಸ್‌ಪ್ರೆಸ್ ಈ ಹಿಂದೆ ಮೈಸೂರಿನಿಂದ ಬೆಳಗಾವಿಗೆ ಪ್ರಯಾಣಿಸಲು 12 ಗಂಟೆ ತೆಗೆದುಕೊಳ್ಳುತ್ತದೆ. ಸದ್ಯ 11 ಗಂಟೆ 15 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಮೈಸೂರಿನಿಂದ ಹಾವೇರಿವರೆಗೂ ರೈಲು ವೇಳಾಪಟ್ಟಿ ಬದಲಾವಣೆಯಾಗಿದ್ದು, ಹುಬ್ಬಳ್ಳಿ ಮತ್ತು ಧಾರವಾಡ ರೈಲು ನಿಲ್ದಾಣಗಳಲ್ಲಿ ರೈಲಿನ ಆಗಮನ/ನಿರ್ಗಮನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.

ಮೈಸೂರು ರೈಲು ನಿಲ್ದಾಣದಿಂದ ರಾತ್ರಿ 9:30 ಕ್ಕೆ ಹೊರಟು ಮರುದಿನ ಬೆಳಿಗ್ಗೆ 8:45 ಕ್ಕೆ ಬೆಳಗಾವಿ ರೈಲು ನಿಲ್ದಾಣವನ್ನು ತಲುಪುತ್ತದೆ. ಈ ರೈಲು ಮಾರ್ಗಮಧ್ಯೆ ಬೆಳಿಗ್ಗೆ 5:10 ಕ್ಕೆ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಆಗಮಿಸುತ್ತದೆ. ಇನ್ನು ಮಾರ್ಗ ಮಧ್ಯ ಉಳಿದ ನಿಲ್ದಾಣಗಳಲ್ಲಿ 15 ರಿಂದ 20 ನಿಮಿಷ ಸಮಯ ವ್ಯತ್ಯಾಸವಾಗಿದೆ. ಉಳಿದಂತೆ ಬೆಳಗಾವಿ – ಮೈಸೂರು ಎಕ್ಸ್‌ಪ್ರೆಸ್‌ ವೇಳಾಪಟ್ಟಿಯಲ್ಲಿ ವ್ಯತ್ಯಾಸ ಇಲ್ಲ.

ಮೈಸೂರು – ಬೆಳಗಾವಿ ಎಕ್ಸ್‌ಪ್ರೆಸ್‌ ವೇಳಾಪಟ್ಟಿ
ಮೈಸೂರು – 9.30ಕ್ಕೆ ನಿರ್ಗಮನ.
ಕೆಆರ್‌ನಗರ – 10.04
ಹೊಳೆನರಸೀಪುರ – 10.56
ಹಾನಸ – 11.30
ಅರಸೀಕೆರೆ – 12.08
ಕಡೂರು – 12.49
ಬೀರೂರು – 12.57
ಚಿಕ್ಕಜಾಜೂರು – 1.44
ದಾವಣಗೆರೆ – 2.20
ಹರಿಹರ – 2.36
ರಾಣೆಬೆನ್ನೂರು – 2.58
ಬ್ಯಾಡಗಿ – 3.19
ಹಾವೇರಿ – 3.35
ಯಲವಿಗಿ -4.05 (ಬೆಳಿಗ್ಗೆ)
ಹುಬ್ಬಳ್ಳಿ – 5.10
ಧಾರವಾಡ – 5.48
ಅಳ್ನಾವರ – 6.29
ಲೋಂಡಾ – 7.12
ಖಾನಾಪೂರ – 7.38
ಬೆಳಗಾವಿ – 8.45

136 ವರ್ಷಗಳಿಂದ ರೈಲು ಸೇವೆ: ”ಬೆಳಗಾವಿಯಲ್ಲಿ ರೈಲು ಸಂಚಾರ 1887ರಲ್ಲಿಆರಂಭಗೊಂಡಿದೆ. ಲೋಂಡಾ- ಬೆಳಗಾವಿ ಮಾರ್ಗದಲ್ಲಿ1887ರ ಮಾರ್ಚ್ 21ರಂದು ಹಾಗೂ ಬೆಳಗಾವಿ- ಮಿರಜ್‌ ಮಾರ್ಗದಲ್ಲಿಅದೇ ವರ್ಷ ಡಿ.22 ರಂದು ಮೊದಲ ರೈಲು ಸಂಚಾರ ನಡೆಸಿದೆ. ಈ ಭಾಗದಲ್ಲಿ136 ವರ್ಷಗಳಿಂದ ರೈಲು ಸೇವೆ ಇರುವುದು ವಿಶೇಷ. ದಿ.ಸುರೇಶ ಅಂಗಡಿ ಅವರು ಕೇಂದ್ರ ಸಚಿವರಾಗಿದ್ದ ವೇಳೆ ಬೆಳಗಾವಿ ರೈಲ್ವೇ ನಿಲ್ದಾಣಕ್ಕೆ 210 ಕೋಟಿ ರೂ.ಅನುದಾನ ತಂದು ಅಭಿವೃದ್ಧಿಗೆ ಶ್ರಮಿಸಿದ್ದರು,” ಎಂದು ಸಂಸದೆ ಮಂಗಲ ಅಂಗಡಿ ಹೇಳಿದರು.

andolanait

Recent Posts

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

11 mins ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

16 mins ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

47 mins ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

3 hours ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

4 hours ago