ರಾಜ್ಯ

ಮೈಸೂರು ಸಮಗ್ರ ಅಭಿವೃದ್ಧಿಯ ಮುನ್ನೋಟ ಕಾರ್ಯಕ್ರಮ: ಮುಡಾದ ಬಗ್ಗೆ ಎಲ್ಲಾ ಪಕ್ಷದ ಶಾಸಕರನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಸಮಗ್ರ ಅಭಿವೃದ್ಧಿಯ ಮುನ್ನೋಟ ಕಾರ್ಯಕ್ರಮದಲ್ಲಿ ಮುಡಾದ ಬಡಾವಣೆಗಳ ಬಗೆಗಿನ ಅವ್ಯವಸ್ಥೆಯ ಕುರಿತು ಎಲ್ಲಾ ಪಕ್ಷದ ಶಾಸಕರನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಧಾನಸೌಧದ ಗೃಹ ಕಚೇರಿ ಕೃಷ್ಣದಲ್ಲಿ ಇಂದು(ಜನವರಿ.10) ಮೈಸೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದರು, ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರುಗಳೊಂದಿಗೆ ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ.

ಇದೇ ವೇಳೆ ಮೈಸೂರು ನಗರದ ಶಾಸಕರು ಮೈಸೂರಿನ‌ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ ಹಾಗೂ ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಕಳೆದ 20 ವರ್ಷಗಳಿಂದ ಮುಡಾದಲ್ಲಿ ಸದಸ್ಯರಾಗಿದ್ದೀರಾ. ಆದರೂ ಯಾಕೆ ಹೀಗೆಲ್ಲಾ ಆಯ್ತು? ಯಾಕೆ ಅವ್ಯವಸ್ಥೆತಯಾಗಲು ಬಿಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಹೊಸ ಬಡಾವಣೆ ನಿರ್ಮಿಸುವಾಗ ವಿದ್ಯುತ್‌ ಸಂಪರ್ಕ, ರಸ್ತೆ, ಒಳಚರಂಡಿ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿಯಾಗಿದೆ. ಹಾಗಾಗಿ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವ ಕಾರಣದಿಂದ ಈ ಸಮಸ್ಯೆ ಮುಂದುವರೆದಿದೆ. ಹೀಗಾಗಿ ಮೈಸೂರು ಮಹಾನಗರ ಪಾಲಿಕೆ ಮತ್ತು ಮುಡಾ ಕಚೇರಿಗಳಲ್ಲಿ ಪ್ರತ್ಯೇಕವಾಗಿ ಸಭೆ ಕರೆಯಲು ಸೂಚಿಸಿದ್ದಾರೆ.

ಇನ್ನೂ ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಸಾಗುತ್ತಿರುವ ಬಗ್ಗೆ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳನ್ನು ಪ್ರಶ್ನಿಸಿದರು. ಬಳಿಕ ಈ ಕುರಿತು ಕೇಂದ್ರ ಸಚಿವರಿಗೆ ವಿವರವಾಗಿ ಪತ್ರ ಬರೆಯಲು ಹಾಗೂ ಈ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಕೇಂದ್ರ ವಿಮಾನಯಾನ ಸಚಿವರನ್ನು ಜನವರಿ.15ಕ್ಜೆ ಭೇಟಿಯಾಗಿ ಸಮಾಲೋಚನೆ ಮಾಡಲಾಗುವುದು ಎಂದು ನಿರ್ಧರಿಸಿದ್ದಾರೆ.

ಮೈಸೂರು ಜಿಲ್ಲಾಭಿವೃದ್ಧಿ ಕುರಿತು ಇಂದು ನಡೆಸಿದ ಸಭೆಯಲ್ಲಿ ಮುಖ್ಯಾಂಶಗಳು

ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ. ಈ ಯೋಜನೆಯಡಿ ಸುಮಾರು 46 ಎಕರೆ ಭೂಸ್ವಾಧೀನ ಆಗಬೇಕಿದೆ. ಈಗಾಗಲೇ 111 ಎಕರೆ ಭೂಸ್ವಾಧೀನಕ್ಕೆ ಪಾವತಿ ಮಾಡಲಾಗಿದೆ. ಇನ್ನೂ 95 ಎಕರೆ ಪಾವತಿ ಆಗಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಲಾಗಿದೆ. ಅಲ್ಲದೇ ಶಿಥಿಲಗೊಂಡಿರುವ ಲಾನ್ಸ್‌ಡೌನ್‌ ಕಟ್ಟಡವನ್ನು ತೆರವುಗೊಳಿಸಿ ಅದೇ ಮಾದರಿಯಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತಾದ ಎಲ್ಲಾ ಕಾನೂನು ತೊಡಕುಗಳನ್ನು ಬಗೆಹರಿಸಬೇಕು ಎಂದಿದ್ದಾರೆ.

ಶಿಥಿಲ ಪರಿಸ್ಥಿತಿಯಲ್ಲಿರುವ ದೇವರಾಜ ಅರಸು ಮಾರುಕಟ್ಟೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಅಭಿವೃದ್ಧಿಪಡಿಸಲು 25 ಕೋಟಿ ರೂ.ಗಳ
ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಇದೇ ರೀತಿ ಕುಕ್ಕರಳ್ಳಿ ಕೆರೆ ಪುನಶ್ಚೇತನಕ್ಕೆ ಕ್ರಮಕ್ಕೆ ಹಾಗೂ ಇದಕ್ಕಾಗಿ ಕೆರೆ ಅಭಿವೃದ್ದಿ ಶುಲ್ಕ ಬಳಸಿಕೊಳ್ಳಲು ಸೂಚಿಸಿದ್ದಾರೆ.

ಮೈಸೂರು ನಗರ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಒಳಚರಂಡಿ ನಿರ್ಮಾಣ, ಕೊಳಚೆ ನೀರು ಸಂಸ್ಕರಣೆ ಯೋಜನೆ ಜಾರಿಗೆ 670 ಕೋಟಿ ರೂ.ಗಳನ್ನು ಡಿಪಿಆರ್‌ ಸಿದ್ಧಪಡಿಸಲಾಗಿದ್ದು, ಅದನ್ನು ಸಂಪುಟದ ಮುಂದೆ ಮಂಡಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಅಂಬೇಡ್ಕರ್‌ ಭವನದ ಕಾಮಗಾರಿಯನ್ನು
23.83 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸುವ ಯೋಜನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಸಾಲಿಗ್ರಾಮ ತಾಲೂಕಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ. ಇದೇ ರೀತಿ ಪಿರಿಯಾಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಅಲ್ಲದೇ ಮೈಸೂರು ನಗರದಲ್ಲಿ 46 ಕಿಮೀ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದೆ. ಐಟಿ ಪಾರ್ಕ್‌ ಸ್ಥಾಪನೆಗೆ ಕೋಚನಹಳ್ಳಿಯಲ್ಲಿ ಜಮೀನು ನೀಡುವ ಕುರಿತು ಕ್ರಮ. ಕೋಚನಹಳ್ಳಿಯಲ್ಲಿ ಕೆಐಎಡಿಬಿಗೆ 404 ಎಕ್ರೆ ಜಮೀನು ಸ್ವಾಧೀನ ಕುರಿತಾಗಿ ಈಗಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇನ್ನೂ ಫಿಲ್ಮ್‌ ಸಿಟಿ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು 13 ಕೋಟಿ ರೂ. ಯೋಜನೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

4 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

4 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

5 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

6 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

6 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

6 hours ago