ರಾಜ್ಯ

ಮೈಸೂರು ಸಮಗ್ರ ಅಭಿವೃದ್ಧಿಯ ಮುನ್ನೋಟ ಕಾರ್ಯಕ್ರಮ: ಮುಡಾದ ಬಗ್ಗೆ ಎಲ್ಲಾ ಪಕ್ಷದ ಶಾಸಕರನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಸಮಗ್ರ ಅಭಿವೃದ್ಧಿಯ ಮುನ್ನೋಟ ಕಾರ್ಯಕ್ರಮದಲ್ಲಿ ಮುಡಾದ ಬಡಾವಣೆಗಳ ಬಗೆಗಿನ ಅವ್ಯವಸ್ಥೆಯ ಕುರಿತು ಎಲ್ಲಾ ಪಕ್ಷದ ಶಾಸಕರನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಧಾನಸೌಧದ ಗೃಹ ಕಚೇರಿ ಕೃಷ್ಣದಲ್ಲಿ ಇಂದು(ಜನವರಿ.10) ಮೈಸೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದರು, ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರುಗಳೊಂದಿಗೆ ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ.

ಇದೇ ವೇಳೆ ಮೈಸೂರು ನಗರದ ಶಾಸಕರು ಮೈಸೂರಿನ‌ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ ಹಾಗೂ ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಕಳೆದ 20 ವರ್ಷಗಳಿಂದ ಮುಡಾದಲ್ಲಿ ಸದಸ್ಯರಾಗಿದ್ದೀರಾ. ಆದರೂ ಯಾಕೆ ಹೀಗೆಲ್ಲಾ ಆಯ್ತು? ಯಾಕೆ ಅವ್ಯವಸ್ಥೆತಯಾಗಲು ಬಿಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಹೊಸ ಬಡಾವಣೆ ನಿರ್ಮಿಸುವಾಗ ವಿದ್ಯುತ್‌ ಸಂಪರ್ಕ, ರಸ್ತೆ, ಒಳಚರಂಡಿ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿಯಾಗಿದೆ. ಹಾಗಾಗಿ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವ ಕಾರಣದಿಂದ ಈ ಸಮಸ್ಯೆ ಮುಂದುವರೆದಿದೆ. ಹೀಗಾಗಿ ಮೈಸೂರು ಮಹಾನಗರ ಪಾಲಿಕೆ ಮತ್ತು ಮುಡಾ ಕಚೇರಿಗಳಲ್ಲಿ ಪ್ರತ್ಯೇಕವಾಗಿ ಸಭೆ ಕರೆಯಲು ಸೂಚಿಸಿದ್ದಾರೆ.

ಇನ್ನೂ ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಸಾಗುತ್ತಿರುವ ಬಗ್ಗೆ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳನ್ನು ಪ್ರಶ್ನಿಸಿದರು. ಬಳಿಕ ಈ ಕುರಿತು ಕೇಂದ್ರ ಸಚಿವರಿಗೆ ವಿವರವಾಗಿ ಪತ್ರ ಬರೆಯಲು ಹಾಗೂ ಈ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಕೇಂದ್ರ ವಿಮಾನಯಾನ ಸಚಿವರನ್ನು ಜನವರಿ.15ಕ್ಜೆ ಭೇಟಿಯಾಗಿ ಸಮಾಲೋಚನೆ ಮಾಡಲಾಗುವುದು ಎಂದು ನಿರ್ಧರಿಸಿದ್ದಾರೆ.

ಮೈಸೂರು ಜಿಲ್ಲಾಭಿವೃದ್ಧಿ ಕುರಿತು ಇಂದು ನಡೆಸಿದ ಸಭೆಯಲ್ಲಿ ಮುಖ್ಯಾಂಶಗಳು

ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ. ಈ ಯೋಜನೆಯಡಿ ಸುಮಾರು 46 ಎಕರೆ ಭೂಸ್ವಾಧೀನ ಆಗಬೇಕಿದೆ. ಈಗಾಗಲೇ 111 ಎಕರೆ ಭೂಸ್ವಾಧೀನಕ್ಕೆ ಪಾವತಿ ಮಾಡಲಾಗಿದೆ. ಇನ್ನೂ 95 ಎಕರೆ ಪಾವತಿ ಆಗಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಲಾಗಿದೆ. ಅಲ್ಲದೇ ಶಿಥಿಲಗೊಂಡಿರುವ ಲಾನ್ಸ್‌ಡೌನ್‌ ಕಟ್ಟಡವನ್ನು ತೆರವುಗೊಳಿಸಿ ಅದೇ ಮಾದರಿಯಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತಾದ ಎಲ್ಲಾ ಕಾನೂನು ತೊಡಕುಗಳನ್ನು ಬಗೆಹರಿಸಬೇಕು ಎಂದಿದ್ದಾರೆ.

ಶಿಥಿಲ ಪರಿಸ್ಥಿತಿಯಲ್ಲಿರುವ ದೇವರಾಜ ಅರಸು ಮಾರುಕಟ್ಟೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಅಭಿವೃದ್ಧಿಪಡಿಸಲು 25 ಕೋಟಿ ರೂ.ಗಳ
ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಇದೇ ರೀತಿ ಕುಕ್ಕರಳ್ಳಿ ಕೆರೆ ಪುನಶ್ಚೇತನಕ್ಕೆ ಕ್ರಮಕ್ಕೆ ಹಾಗೂ ಇದಕ್ಕಾಗಿ ಕೆರೆ ಅಭಿವೃದ್ದಿ ಶುಲ್ಕ ಬಳಸಿಕೊಳ್ಳಲು ಸೂಚಿಸಿದ್ದಾರೆ.

ಮೈಸೂರು ನಗರ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಒಳಚರಂಡಿ ನಿರ್ಮಾಣ, ಕೊಳಚೆ ನೀರು ಸಂಸ್ಕರಣೆ ಯೋಜನೆ ಜಾರಿಗೆ 670 ಕೋಟಿ ರೂ.ಗಳನ್ನು ಡಿಪಿಆರ್‌ ಸಿದ್ಧಪಡಿಸಲಾಗಿದ್ದು, ಅದನ್ನು ಸಂಪುಟದ ಮುಂದೆ ಮಂಡಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಅಂಬೇಡ್ಕರ್‌ ಭವನದ ಕಾಮಗಾರಿಯನ್ನು
23.83 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸುವ ಯೋಜನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಸಾಲಿಗ್ರಾಮ ತಾಲೂಕಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ. ಇದೇ ರೀತಿ ಪಿರಿಯಾಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಅಲ್ಲದೇ ಮೈಸೂರು ನಗರದಲ್ಲಿ 46 ಕಿಮೀ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದೆ. ಐಟಿ ಪಾರ್ಕ್‌ ಸ್ಥಾಪನೆಗೆ ಕೋಚನಹಳ್ಳಿಯಲ್ಲಿ ಜಮೀನು ನೀಡುವ ಕುರಿತು ಕ್ರಮ. ಕೋಚನಹಳ್ಳಿಯಲ್ಲಿ ಕೆಐಎಡಿಬಿಗೆ 404 ಎಕ್ರೆ ಜಮೀನು ಸ್ವಾಧೀನ ಕುರಿತಾಗಿ ಈಗಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇನ್ನೂ ಫಿಲ್ಮ್‌ ಸಿಟಿ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು 13 ಕೋಟಿ ರೂ. ಯೋಜನೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

10 mins ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

4 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

4 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

5 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

5 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

5 hours ago