Categories: ರಾಜ್ಯ

ಮೈಸೂರು ದಸರಾ 2024: ನಾಳೆ ಗಜಪಯಣ; ಈ ಬಾರಿಯೂ ಅಭಿಮನ್ಯುವೇ ಕ್ಯಾಪ್ಟನ್‌!

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ಗೆ ಕ್ಷಣಗಣನೆ ಶುರುವಾಗಿದ್ದು, ದಸರಾದ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆಯ ಮೊದಲ ತಂಡ ನಾಳೆ (ಆ.21) ಸಾಂಪ್ರದಾಯಿಕವಾಗಿ ಕಾಡಿನಿಂದ ನಾಡಿನತ್ತ ಆಗಮಿಸಲಿವೆ.

ನಾಳೆ ಬೆಳಿಗ್ಗೆ 10.20 ರಿಂದ 10.45 ವರೆಗಿನ ಶುಭ ತುಲಾ ಲಘ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಹುಣಸೂರಿನ ವೀರನಹೊಸಹಳ್ಳಿಯಿಂದ ಅಭಿಮನ್ಯು ನೇತೃತ್ವದ 9 ಆನೆಗಳ ತಂಡ ಗಜಪಯಣ ನಡೆಸಲಿವೆ. ಆ ಮೂಲಕ 2024ರ ದಸರಾ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ಸಿಗಲಿದೆ.

ಗಜಪಯಣದ ಬಳಿಕ ವೀರನಹೊಸಹಳ್ಳಿಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಸಿ ಮಹದೇವಪ್ಪ, ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದಸರಾಗೆ ಆಗಮಿಸಲಿರುವ ಮಾವುತರು ಹಾಗೂ ಕಾವಾಡಿಗಳಿಗೆ ಇದೇ ಸಂದರ್ಭದಲ್ಲಿ ಸನ್ಮಾನ ಕೂಡಾ ನಡೆಯಲಿದೆ.

ಈ ಬಾರಿಯ ದಸರಾ ಗಜಪಡೆಯಲ್ಲಿ ಒಟ್ಟು 14 ಆನೆಗಳಿರಲಿವೆ. ಈ ಬಾರಿಯೂ ಕೂಡಾ ಅಂಬಾರಿ ಹೊರುವ ಜವಾಬ್ದಾರಿ ಅಭಿಮನ್ಯು ಹೆಗಲ ಮೇಲಿದೆ. ಮೊದಲ ಹಂತದ ಗಜಪಯಣದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಲಿದ್ದು, ಎರಡನೇ ಹಂತದಲ್ಲಿ 5 ಆನೆಗಳು ಆಗಮಿಸಲಿವೆ. ಇನ್ನು ಹೆಚ್ಚುವರಿಯಾಗಿ ನಾಲ್ಕು ಆನೆಗಳನ್ನು ಮೀಸಲಿಟ್ಟುಕೊಳ್ಳಲಾಗಿದೆ.

ಮೊದಲ ಹಂತದಲ್ಲಿ ಆಗಮಿಸಲಿರುವ ಆನೆಗಳ ಪಟ್ಟಿ: ಅಭಿಮನ್ಯು (ನಾಯಕ), ಧನಂಜಯ, ಭೀಮ, ಗೋಪಿ, ಕಂಜನ್‌, ರೋಹಿಣಿ, ಏಕಲವ್ಯ, ವರಲಕ್ಷ್ಮಿ, ಲಕ್ಷ್ಮೀ ಆನೆಗಳು ಬರಲಿವೆ.

ಎರಡನೇ ಹಂತದಲ್ಲಿ ಆಗಮಿಸಲಿರುವ ಆನೆಗಳ ಪಟ್ಟಿ: ಪ್ರಶಾಂತ, ಮಹೇಂದ್ರ ಸುಘ್ರೀವಾ, ಹಿರಣ್ಯ ಮತ್ತು ಲಕ್ಷ್ಮೀ ಆನೆಗಳು.

ವೀರನಹೊಸಹಳ್ಳಿಯಿಂದ ಗಜಪಯಣದ ಮೂಲಕ ಆಗಮಿಸುವ ಆನೆಗಳನ್ನು ಆ.23 ರಂದು ಅರಮನೆಗೆ ಬರಮಾಡಿಕೊಳ್ಳಲಾಗುವುದು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬೆಳ್ಳಂಬೆಳಗ್ಗೆ JCB ಘರ್ಜನೆ ; ಸರ್ಕಾರಿ ಜಾಗ ಅಕ್ರಮ ತೆರವು

ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…

22 mins ago

ಡ್ರಗ್ಸ್‌ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ವೈಫಲ್ಯ ; ಕಮಿಷನರ್ ಸೀಮಾ ಲಾಟ್ಕರ್ ಸಿಬ್ಬಂದಿಗೆ ಬಿಗ್ ಶಾಕ್!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…

1 hour ago

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು…

2 hours ago

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

6 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

6 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

6 hours ago