Categories: ರಾಜ್ಯ

ಮೈಸೂರು ದಸರಾ 2024: ನಾಳೆ ಗಜಪಯಣ; ಈ ಬಾರಿಯೂ ಅಭಿಮನ್ಯುವೇ ಕ್ಯಾಪ್ಟನ್‌!

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ಗೆ ಕ್ಷಣಗಣನೆ ಶುರುವಾಗಿದ್ದು, ದಸರಾದ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆಯ ಮೊದಲ ತಂಡ ನಾಳೆ (ಆ.21) ಸಾಂಪ್ರದಾಯಿಕವಾಗಿ ಕಾಡಿನಿಂದ ನಾಡಿನತ್ತ ಆಗಮಿಸಲಿವೆ.

ನಾಳೆ ಬೆಳಿಗ್ಗೆ 10.20 ರಿಂದ 10.45 ವರೆಗಿನ ಶುಭ ತುಲಾ ಲಘ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಹುಣಸೂರಿನ ವೀರನಹೊಸಹಳ್ಳಿಯಿಂದ ಅಭಿಮನ್ಯು ನೇತೃತ್ವದ 9 ಆನೆಗಳ ತಂಡ ಗಜಪಯಣ ನಡೆಸಲಿವೆ. ಆ ಮೂಲಕ 2024ರ ದಸರಾ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ಸಿಗಲಿದೆ.

ಗಜಪಯಣದ ಬಳಿಕ ವೀರನಹೊಸಹಳ್ಳಿಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಸಿ ಮಹದೇವಪ್ಪ, ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದಸರಾಗೆ ಆಗಮಿಸಲಿರುವ ಮಾವುತರು ಹಾಗೂ ಕಾವಾಡಿಗಳಿಗೆ ಇದೇ ಸಂದರ್ಭದಲ್ಲಿ ಸನ್ಮಾನ ಕೂಡಾ ನಡೆಯಲಿದೆ.

ಈ ಬಾರಿಯ ದಸರಾ ಗಜಪಡೆಯಲ್ಲಿ ಒಟ್ಟು 14 ಆನೆಗಳಿರಲಿವೆ. ಈ ಬಾರಿಯೂ ಕೂಡಾ ಅಂಬಾರಿ ಹೊರುವ ಜವಾಬ್ದಾರಿ ಅಭಿಮನ್ಯು ಹೆಗಲ ಮೇಲಿದೆ. ಮೊದಲ ಹಂತದ ಗಜಪಯಣದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಲಿದ್ದು, ಎರಡನೇ ಹಂತದಲ್ಲಿ 5 ಆನೆಗಳು ಆಗಮಿಸಲಿವೆ. ಇನ್ನು ಹೆಚ್ಚುವರಿಯಾಗಿ ನಾಲ್ಕು ಆನೆಗಳನ್ನು ಮೀಸಲಿಟ್ಟುಕೊಳ್ಳಲಾಗಿದೆ.

ಮೊದಲ ಹಂತದಲ್ಲಿ ಆಗಮಿಸಲಿರುವ ಆನೆಗಳ ಪಟ್ಟಿ: ಅಭಿಮನ್ಯು (ನಾಯಕ), ಧನಂಜಯ, ಭೀಮ, ಗೋಪಿ, ಕಂಜನ್‌, ರೋಹಿಣಿ, ಏಕಲವ್ಯ, ವರಲಕ್ಷ್ಮಿ, ಲಕ್ಷ್ಮೀ ಆನೆಗಳು ಬರಲಿವೆ.

ಎರಡನೇ ಹಂತದಲ್ಲಿ ಆಗಮಿಸಲಿರುವ ಆನೆಗಳ ಪಟ್ಟಿ: ಪ್ರಶಾಂತ, ಮಹೇಂದ್ರ ಸುಘ್ರೀವಾ, ಹಿರಣ್ಯ ಮತ್ತು ಲಕ್ಷ್ಮೀ ಆನೆಗಳು.

ವೀರನಹೊಸಹಳ್ಳಿಯಿಂದ ಗಜಪಯಣದ ಮೂಲಕ ಆಗಮಿಸುವ ಆನೆಗಳನ್ನು ಆ.23 ರಂದು ಅರಮನೆಗೆ ಬರಮಾಡಿಕೊಳ್ಳಲಾಗುವುದು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

8 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

8 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

8 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

8 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

8 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

8 hours ago