ರಾಜ್ಯ

ಮೈಸೂರು ದಸರಾ ಅದ್ದೂರಿ ಹಗರಣಕ್ಕೆ ವೇದಿಕೆಯಾಗದಿರಲಿ: ಆರ್‌.ಅಶೋಕ್‌

ಬೆಂಗಳೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಈ ವರ್ಷ ಕಾಂಗ್ರೆಸ್‌ ಸರ್ಕಾರ ಅದ್ದೂರಿಯಾಗಿ ಆಚರಿಸಬೇಕು ಎಂಬ ನಿರ್ಧಾರ ಸಂಪೂರ್ಣ ಸ್ವಾಗತಾರ್ಹವಾಗಿದೆ. ಆದರೆ ಮೈಸೂರಿನಲ್ಲಿ ದಸರಾ ಉತ್ಸವ ಮತ್ತೊಂದು ಅದ್ದೂರಿ ಹಗರಣಕ್ಕೆ ವೇದಿಕೆಯಾಗದಿರಲಿ ಎಂಬುದೇ ಕನ್ನಡಿಗರ ಆಶಯ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೆ ಬಂದಾಗನಿಂದ ಇಲ್ಲಿಯವರೆಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಹಾಗೂ ಮುಡಾ ಹಗರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಮೈಸೂರಿನಲ್ಲಿ ಅದ್ದೂರಿ ದಸರಾ ನಡೆಸಲು ಸರ್ಕಾರ ಮುಂದಾಗಿದ್ದು ಒಳ್ಳೆಯ ವಿಷಯವೇ ಆಗಿದೆ. ಆದರೆ ಈ ದಸರಾ ಮಹೋತ್ಸವದಲ್ಲೂ ಹಗರಣ ಎಸಗದೇ ಹಾಗೂ ಕಳೆದ ವರ್ಷದಂತೆ ಕಮಿಷನ್ ಕೇಳಿ ರಾಜ್ಯದ ಮಾನ ಹರಾಜು ಹಾಕದಿರಲಿ ಎಂದು ಅಶೋಕ್‌ ಹೇಳಿದರು.

ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಕಳೆದ ವರ್ಷ ದಸರಾ ಸಂದರ್ಭದಲ್ಲಿ ಸರೋದ್ ವಾದಕ ಶ್ರೀ ಪಂಡಿತ್ ತಾರಾನಾಥ್ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಲಾಗಿತ್ತು. ಹೀಗಾಗಿ ಈ ಬಾರಿಯ ಅದ್ದೂರಿ ದಸರಾದಲ್ಲಿ ಯಾವುದೇ ಭ್ರಷ್ಟಾಚಾರ ಎಸಗದೇ ನಾಡಿನ ಮಾನ ಹರಾಜು ಹಾಕದಿರಲಿ ಎಂದು ಪತ್ರಿಕಾ ವರದಿಯ ತುಣುಕನ್ನು ಉಲ್ಲೇಖಿಸಿದ್ದಾರೆ.

ರಾಜ್ಯ ಸರ್ಕಾರ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಈ ವರ್ಷವಾದರೂ ಭ್ರಷ್ಟಾಚಾರದ ಸೋಂಕು ತಗುಲಿಸದೇ ಇದ್ದರ ಸಾಕು. ಸರ್ಕಾರ ಕನ್ನಡ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಇನ್ನೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕರ್ನಾಟಕದ ಕಳಿಯುತ್ತೋ ಕಾದು ನೋಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

2 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

3 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

4 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

4 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

5 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

7 hours ago