ರಾಜ್ಯ

ಮೈಸೂರು ದಸರಾ ಅದ್ದೂರಿ ಹಗರಣಕ್ಕೆ ವೇದಿಕೆಯಾಗದಿರಲಿ: ಆರ್‌.ಅಶೋಕ್‌

ಬೆಂಗಳೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಈ ವರ್ಷ ಕಾಂಗ್ರೆಸ್‌ ಸರ್ಕಾರ ಅದ್ದೂರಿಯಾಗಿ ಆಚರಿಸಬೇಕು ಎಂಬ ನಿರ್ಧಾರ ಸಂಪೂರ್ಣ ಸ್ವಾಗತಾರ್ಹವಾಗಿದೆ. ಆದರೆ ಮೈಸೂರಿನಲ್ಲಿ ದಸರಾ ಉತ್ಸವ ಮತ್ತೊಂದು ಅದ್ದೂರಿ ಹಗರಣಕ್ಕೆ ವೇದಿಕೆಯಾಗದಿರಲಿ ಎಂಬುದೇ ಕನ್ನಡಿಗರ ಆಶಯ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೆ ಬಂದಾಗನಿಂದ ಇಲ್ಲಿಯವರೆಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಹಾಗೂ ಮುಡಾ ಹಗರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಮೈಸೂರಿನಲ್ಲಿ ಅದ್ದೂರಿ ದಸರಾ ನಡೆಸಲು ಸರ್ಕಾರ ಮುಂದಾಗಿದ್ದು ಒಳ್ಳೆಯ ವಿಷಯವೇ ಆಗಿದೆ. ಆದರೆ ಈ ದಸರಾ ಮಹೋತ್ಸವದಲ್ಲೂ ಹಗರಣ ಎಸಗದೇ ಹಾಗೂ ಕಳೆದ ವರ್ಷದಂತೆ ಕಮಿಷನ್ ಕೇಳಿ ರಾಜ್ಯದ ಮಾನ ಹರಾಜು ಹಾಕದಿರಲಿ ಎಂದು ಅಶೋಕ್‌ ಹೇಳಿದರು.

ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಕಳೆದ ವರ್ಷ ದಸರಾ ಸಂದರ್ಭದಲ್ಲಿ ಸರೋದ್ ವಾದಕ ಶ್ರೀ ಪಂಡಿತ್ ತಾರಾನಾಥ್ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಲಾಗಿತ್ತು. ಹೀಗಾಗಿ ಈ ಬಾರಿಯ ಅದ್ದೂರಿ ದಸರಾದಲ್ಲಿ ಯಾವುದೇ ಭ್ರಷ್ಟಾಚಾರ ಎಸಗದೇ ನಾಡಿನ ಮಾನ ಹರಾಜು ಹಾಕದಿರಲಿ ಎಂದು ಪತ್ರಿಕಾ ವರದಿಯ ತುಣುಕನ್ನು ಉಲ್ಲೇಖಿಸಿದ್ದಾರೆ.

ರಾಜ್ಯ ಸರ್ಕಾರ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಈ ವರ್ಷವಾದರೂ ಭ್ರಷ್ಟಾಚಾರದ ಸೋಂಕು ತಗುಲಿಸದೇ ಇದ್ದರ ಸಾಕು. ಸರ್ಕಾರ ಕನ್ನಡ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಇನ್ನೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕರ್ನಾಟಕದ ಕಳಿಯುತ್ತೋ ಕಾದು ನೋಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

21 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 days ago