ರಾಜ್ಯ

ಮೈಸೂರು ದಸರಾ ಟಿಕೆಟ್‌ನಲ್ಲೂ ಅವ್ಯವಹಾರ : ಸಿಎಂ,ಡಿಸಿಎಂ ಜನಸಾಮಾನ್ಯರ ಕ್ಷಮೆ ಕೇಳಲಿ ; ಅಶೋಕ್‌ ಒತ್ತಾಯ

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಆಚರಣೆ ವೇಳೆ ಅವ್ಯವಸ್ಥೆಯ ಜೊತೆಗೆ ಅವ್ಯವಹಾರ ನಡೆದಿದ್ದು. ಟಿಕೆಟ್ ಪಡೆದ ಮೇಲೂ ಪ್ರವೇಶ ಸಿಗದ ಪ್ರವಾಸಿಗರು ಹಾಗೂ ಜನಸಾಮಾನ್ಯರಲ್ಲಿ ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಿ ಅವರಿಂದ ಪಡೆದುಕೊಂಡಿದ್ದ ಹಣವನ್ನು ತತ್ ಕ್ಷಣವೇ ಹಿಂತಿರುಗಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಒತ್ತಾಯಿಸಿದ್ದಾರೆ.

ಈ ಸಬಂಧ ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಸರ್ಕಾರದ ವಿರುದ್ದ ಪೋಸ್ಟ್ ಮಾಡಿರುವ ಅವರು, ನಾಡಹಬ್ಬ ದಸರಾ ಆಚರಣೆಯಲ್ಲೂ ಕಾಂಗ್ರೆಸ್ ಸರ್ಕಾರದ ಅವ್ಯವಸ್ಥೆ ಮತ್ತು ಅವ್ಯವಹಾರ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನು ಓದಿ : ಸಿನಿಪ್ರಿಯರಿಗೆ ಶಾಕ್:‌ ಸಿನಿಮಾ ಟಿಕೆಟ್‌ ದರ 200ರೂ ನಿಗದಿಗೆ ಹೈಕೋರ್ಟ್‌ ತಡೆಯಾಜ್ಞೆ

ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ವೀಕ್ಷಣೆಗೆ ಸಾವಿರಾರು ರೂಪಾಯಿ ಕೊಟ್ಟು ಗೋಲ್ಡ್ ಕಾರ್ಡ್, ವಿಐಪಿ ಟಿಕೆಟ್ ಪಡೆದಿದ್ದರೂ ಒಳಗೆ ಪ್ರವೇಶ ಸಿಗದೇ ಪ್ರವಾಸಿಗರು ಪರದಾಡಿರುವ ಘಟನೆ, ಕಾಂಗ್ರೆಸ್ ಸರ್ಕಾರ ನಾಡಹಬ್ಬ ದಸರಾ ಆಚರಣೆಯ ಬಗ್ಗೆ ಎಷ್ಟು ನಿರ್ಲಕ್ಷ್ಯ, ಅಸಡ್ಡೆ ತೋರಿದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಎಂದು ವಾಗ್ದಳಿ ನಡೆಸಿದ್ದಾರೆ.

ಪ್ರವೇಶ ನೀಡಲು ಸಾಧ್ಯವಾಗದ ಮೇಲೆ 6,500 ಪಡೆದು ಗೋಲ್ಡ್ ಕಾರ್ಡ್ ಯಾಕೆ ವಿತರಿಸಬೇಕಿತ್ತು? ಲಭ್ಯವಿರುವ ಸ್ಥಳಾವಕಾಶಕ್ಕಿಂತ ಹೆಚ್ಚು ಗೋಲ್ಡ್ ಕಾರ್ಡ್ ಮಾರಾಟ ಮಾಡುವ ನಿರ್ಧಾರ ಯಾರದ್ದು? ಇದರ ಯೋಜನೆ, ನಿರ್ವಹಣೆಯ ಜವಾಬ್ದಾರಿ ಯಾರದ್ದು?.ಈ ಎಲ್ಲ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅವರು ಉತ್ತರಿಸಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

54 mins ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

17 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

17 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

20 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

22 hours ago