ರಾಜ್ಯ

ಮುಡಾ ಪ್ರಕರಣ| ಐಜಿಪಿ ಸುಬ್ರಹ್ಮಣ್ಯೇಶ್ವರ್‌ ರಾವ್‌ ಅಂತಿಮ ವರದಿ ಸಲ್ಲಿಕೆ: ಮೈಸೂರು ಲೋಕಾಯುಕ್ತ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ತನಿಖೆಯನ್ನು ಅಂತಿಮಗೊಳಿಸಿ ಐಜಿಪಿ ಸುಬ್ರಹ್ಮಣ್ಯೇಶ್ವರ್‌ ರಾವ್‌ ಅವರಿಗೆ ವರದಿ ಸಲ್ಲಿಕೆ ಮಾಡಿದ್ದಾರೆ.

ಇಲ್ಲಿನ ಲೋಕಾಯುಕ್ತ ಕಚೇರಿಗೆ ಇಂದು(ಫೆಬ್ರವರಿ.12) ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್‌ ಅವರು ಮುಡಾ ಪ್ರಕರಣದ ವಿಚಾರವಾಗಿ ತನಿಖೆ ನಡೆಸಿರುವುದನ್ನು ಮುಚ್ಚಿದ ಲಕೋಟೆಯಲ್ಲಿ ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ್‌ ರಾವ್‌ ಅವರಿಗೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಈ ವರದಿಯನ್ನು ಮತ್ತೊಮ್ಮೆ ಹಿರಿಯ ಅಧಿಕಾರಿಗಳ ಜೊತೆ ಪರಿಶೀಲಿಸಿದ ಬಳಿಕ ವಿಶೇಷ ಜನಪ್ರತಿನೀಧಿಗಳ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಮುಡಾ ಪ್ರಕರಣದ ಅಂತಿಮ ವರದಿಯಲ್ಲಿ ತನಿಖಾಧಿಕಾರಿಗಳು ಏನು ನೀಡಿದ್ದಾರೆಂಬುದು ಗೌಪ್ಯವಾಗಿಯೇ ಉಳಿದಿದೆ. ಮೈಸೂರು ಲೋಕಾಯುಕ್ತ ಅಧಿಕಾರಿಗಳು ವರದಿಯ ಬಗ್ಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಈ ಹಗರಣ ಸಂಬಂಧ ವರದಿ ಸಲ್ಲಿಸಲು ಹೈಕೋರ್ಟ್‌ ಜ.27ರ ಗಡುವು ನೀಡಿತ್ತು. ಆದರೆ ಇತ್ತೀಚಿಗೆ ಧಾರವಾಡ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವೂ ತಡೆಯಾಜ್ಞೆಯನ್ನು ತೆರವುಗೊಳಿಸಿ ಅಂತಿಮ ವರದಿ ಸಲ್ಲಿಕೆಗೆ ಸೂಚನೆ ನೀಡಿದ್ದರು.

ಇನ್ನೂ ಮೂಲಗಳ ಪ್ರಕಾರ ಈ ವರದಿಯನ್ನು ಲೋಕಾಯುಕ್ತ ಪೊಲೀಸರ ನೇತೃತ್ವದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಎಡಿಜಿಪಿ ಮನೀಶ್ ಖಾರ್ಬಿಕರ್ ಮತ್ತು ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಅವರು ಶುಕ್ರವಾರ(ಫೆಬ್ರವರಿ.14) ಪರಿಶೀಲನೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಚನ ಎಸ್‌ ಎಸ್

Recent Posts

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

17 mins ago

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

5 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

7 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

15 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

17 hours ago