ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ತನಿಖೆಯನ್ನು ಅಂತಿಮಗೊಳಿಸಿ ಐಜಿಪಿ ಸುಬ್ರಹ್ಮಣ್ಯೇಶ್ವರ್ ರಾವ್ ಅವರಿಗೆ ವರದಿ ಸಲ್ಲಿಕೆ ಮಾಡಿದ್ದಾರೆ.
ಇಲ್ಲಿನ ಲೋಕಾಯುಕ್ತ ಕಚೇರಿಗೆ ಇಂದು(ಫೆಬ್ರವರಿ.12) ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರು ಮುಡಾ ಪ್ರಕರಣದ ವಿಚಾರವಾಗಿ ತನಿಖೆ ನಡೆಸಿರುವುದನ್ನು ಮುಚ್ಚಿದ ಲಕೋಟೆಯಲ್ಲಿ ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ್ ರಾವ್ ಅವರಿಗೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಈ ವರದಿಯನ್ನು ಮತ್ತೊಮ್ಮೆ ಹಿರಿಯ ಅಧಿಕಾರಿಗಳ ಜೊತೆ ಪರಿಶೀಲಿಸಿದ ಬಳಿಕ ವಿಶೇಷ ಜನಪ್ರತಿನೀಧಿಗಳ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಮುಡಾ ಪ್ರಕರಣದ ಅಂತಿಮ ವರದಿಯಲ್ಲಿ ತನಿಖಾಧಿಕಾರಿಗಳು ಏನು ನೀಡಿದ್ದಾರೆಂಬುದು ಗೌಪ್ಯವಾಗಿಯೇ ಉಳಿದಿದೆ. ಮೈಸೂರು ಲೋಕಾಯುಕ್ತ ಅಧಿಕಾರಿಗಳು ವರದಿಯ ಬಗ್ಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಈ ಹಗರಣ ಸಂಬಂಧ ವರದಿ ಸಲ್ಲಿಸಲು ಹೈಕೋರ್ಟ್ ಜ.27ರ ಗಡುವು ನೀಡಿತ್ತು. ಆದರೆ ಇತ್ತೀಚಿಗೆ ಧಾರವಾಡ ಹೈಕೋರ್ಟ್ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವೂ ತಡೆಯಾಜ್ಞೆಯನ್ನು ತೆರವುಗೊಳಿಸಿ ಅಂತಿಮ ವರದಿ ಸಲ್ಲಿಕೆಗೆ ಸೂಚನೆ ನೀಡಿದ್ದರು.
ಇನ್ನೂ ಮೂಲಗಳ ಪ್ರಕಾರ ಈ ವರದಿಯನ್ನು ಲೋಕಾಯುಕ್ತ ಪೊಲೀಸರ ನೇತೃತ್ವದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಎಡಿಜಿಪಿ ಮನೀಶ್ ಖಾರ್ಬಿಕರ್ ಮತ್ತು ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಅವರು ಶುಕ್ರವಾರ(ಫೆಬ್ರವರಿ.14) ಪರಿಶೀಲನೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…