Siddaramaiah. Photo: PTI
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆದಿದ್ದು, ವಿಚಾರಣೆ ಜನವರಿ.27ಕ್ಕೆ ಮುಂದೂಡಿಕೆಯಾಗಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ಸುದೀರ್ಘ ವಾದ ಹಾಗೂ ಪ್ರತಿವಾದ ಆಲಿಸಿತು. ಸ್ನೇಹಮಯಿ ಕೃಷ್ಣ ಪರ ವಕೀಲ ಮಣಿಂದರ್ ಸಿಂಗ್ ವಾದ ಹಾಗೂ ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ಅವರ ಪ್ರತಿವಾದ ಆಲಿಸಿತು.
ಈ ವೇಳೆ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಎಂ ಪರ ವಕೀಲರು ಸಮಯ ಕೇಳಿದ್ದು, ಮನವಿ ಪರಿಗಣಿಸಿದ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಜನವರಿ.27ಕ್ಕೆ ಮುಂದೂಡಿಕೆ ಮಾಡಿದೆ.
ಮೈಸೂರು ಮುಡಾದಿಂದ 14 ಸೈಟ್ಗಳನ್ನು ಅಕ್ರಮವಾಗಿ ಪಡೆದ ಆರೋಪ ಸಿಎಂ ಸಿದ್ದರಾಮಯ್ಯ ಪತ್ನಿ ಮೇಲಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಮತ್ತು ಇ.ಡಿ ಅಧಿಕಾರಿಗಳು ಸಿಎಂ ಕುಟುಂಬಸ್ಥರನ್ನು ವಿಚಾರಣೆ ನಡೆಸಿದ್ದಾರೆ.
ಆದರೆ ಇದಕ್ಕೆಲ್ಲಾ ವಿರೋಧ ವ್ಯಕ್ತಪಡಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತದಲ್ಲಿ ಸರಿಯಾದ ತನಿಖೆ ನಡೆಸಿಲ್ಲ. ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಧ್ಯ ಪ್ರವೇಶಿಸಬೇಕು. ಮುಡಾ ಹಗರಣ ಸಂಬಂಧ ಸಿಬಿಐ ತನಿಖೆಯಾಗಬೇಕು ಎಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಚಾರಣೆಯನ್ನು ಜನವರಿ.27ಕ್ಕೆ ಮುಂದೂಡಿಕೆ ಮಾಡಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…