ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಡ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ.
ರಾಜ್ಯದಲ್ಲಿ ಮುಡಾ ಹಗರಣ ಎಲ್ಲೆಡೆ ಸದ್ದು ಮಾಡುತ್ತಿದ್ದು, ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.
ಮೈಸೂರು ಪಾದಯಾತ್ರೆ ರೂಪುರೇಷೆ ಸಂಬಂಧ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈತ್ರಿ ನಾಯಕರು, ಮುಂದಿನ ಶನಿವಾರದಂದು ಬೆಂಗಳೂರಿನ ನೈಸ್ ರಸ್ತೆಯಿಂದ ಪಾದಯಾತ್ರೆ ಆರಂಭವಾಗಲಿದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಪಾದಯಾತ್ರೆ ಮಾರ್ಗ ಮಧ್ಯೆ ಕೆಲವು ಕಡೆ ಜನರನ್ನು ಸೇರಿಸಿ ಮೈತ್ರಿ ಪಕ್ಷಗಳು ಸಮಾವೇಶ ನಡೆಸಲಿವೆ. ಶನಿವಾರದಿಂದ ಒಂದು ವಾರಗಳ ಕಾಲ ಪಾದಯಾತ್ರೆ ನಡೆಯಲಿದ್ದು, ದಿನಕ್ಕೆ 20 ಕಿ.ಮೀ ಪಾದಯಾತ್ರೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಪಾದಯಾತ್ರೆಯಲ್ಲಿ ಬಿಜೆಪಿ-ಜೆಡಿಎಸ್ನ ಎಲ್ಲಾ ಶಾಸಕರು ಕೂಡ ಭಾಗಿಯಾಗಲಿದ್ದು, ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸುತ್ತೇವೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಕಿಡಿಕಾರಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…